ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತಟದಲ್ಲಿ ನೆಲೆಯಾಗಿ ಚಿಕ್ಕ ಶಬರಿಮಲೆಯೆಂದೇ ಹೇಳಲ್ಪಡುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 25ನೇ ಬ್ರಹ್ಮೋತ್ಸವದ ಅಂಗವಾಗಿ ಇಂದು ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಅನ್ನ ಸಂತರ್ಪಣೆ ಹಾಗೂ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ನಂಜನಗೂಡು ಸೇರಿದಂತೆ ವಿವಿಧ ಕಡೆಯಿಂದ ಭಕ್ತರ ಮಹಾಪೂರವೇ ಹರಿದು ಬಂದಿತ್ತು.
ಬಂದ ಎಲ್ಲ ಭಕ್ತರಿಗೆ ದೇವಾಲಯದ ವತಿಯಿಂದ ಸಿಹಿ ಖಾದ್ಯ ಸೇರಿದಂತೆ ಭರ್ಜರಿ ಅಡುಗೆ ಪ್ರಸಾದ ಮಾಡಲಾಗಿತ್ತು.
ದೇವಾಲಯದ ಗುರುಸ್ವಾಮಿಗಳಾದ ದೇವರಾಜಸ್ವಾಮಿಗಳು ಭಕ್ತರಿಗೆ ಪ್ರಸಾದ ಬಡಿಸುವ ಮೂಲಕ ಅನ್ನ ಸಂತರ್ಪಣೆಗೆ ಚಾಲನೆ ನೀಡಿದರು.
ಬಳಿಕ ಮಧ್ಯಾಹ್ನ 3:00ಘಂಟೆ ಮೇಲೆ ದೇವಾಲಯದಿಂದ ತಂದ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಕುದುರೆ ಸಾರೋಟಿನ ಮಾದರಿಯ ರಥದಲ್ಲಿ ಕೂರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ವೀರಗಾಸೆ ಡೊಳ್ಳು ಕುಣಿತ ಪೂಜಾ ಕುಣಿತ ಗಾರಡಿ ಗೊಂಬೆ ಹುಲಿ ವೇಷ ಸೇರಿದಂತೆ ಹಲವಾರು ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು.
ಮೆರವಣಿಗೆಗೆ ಉದ್ದಕ್ಕೂ ಭಕ್ತರು ರಸ್ತೆಗೆ ನೀರು ಹಾಕಿ ರಂಗೋಲಿ ಹಾಕಿ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಬಳಿಕ ಗುರುಸ್ವಾಮಿಗಳಾದ ದೇವರಾಜಸ್ವಾಮಿ ಮಾತನಾಡಿ 25ನೇ ಬ್ರಹ್ಮೋತ್ಸವದ ಅಂಗವಾಗಿ ನಡೆಯುತ್ತಿರುವ ಅನ್ನಸಂತಪಣೆ ಹಾಗು ಅಯ್ಯಪ್ಪ ಸ್ವಾಮಿ ಮೆರವಣಿಗೆ ಬಗ್ಗೆ ವಿವರಿಸಿದರು.