ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷದವರು ಕೋವಿಡ್ ಗೆ ಒಳಗಾಗಿದ್ದಾರೆ ಎಂದು ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬಣದಿಂದ ಕೋವಿಡ್ ಅಳತೆ ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸಿಎಂ ಯಡಿಯೂರಪ್ಪ ಬದಲಾವಣೆ ಇಲ್ಲ. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದೆಲ್ಲ ಮಾಧ್ಯಮದ ಸೃಷ್ಠಿ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರದ ಬಗ್ಗೆ ಕುಮಾರಸ್ವಾಮಿ ಒಲವು ಹೊಂದಿದ್ದಾರೆ ಅನ್ನೋ ಸಿಪಿ ಯೋಗೇಶ್ವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಹೆಬ್ಬಾರ್, ಯೋಗಿಶ್ವರ್ ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಗೊತ್ತಿಲ್ಲ.
ಸರ್ಕಾರ ನಡೆಸೋಕೆ ಸಿಎಂ ಸಮರ್ಥವಾಗಿದ್ದಾರೆ. ನಾಲ್ಕು ದಶಕಗಳ ಕಾಲ ಸುದೀರ್ಘವಾಗಿ ಪಕ್ಷ ಕಟ್ಟಿದ ಧೀಮಂತ ನಾಯಕ ಯಡ್ಡಿಯೂರಪ್ಪ. ಅವರಿಗೆ ಯಾರಿಂದಲೂ ಉಪದೇಶ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ಯೋಗಿಶ್ವರ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದರು.