3 ವರ್ಷ ಬಿಎಸ್ ವೈ ಸಿಎಂ ಆಗಿರ್ತಾರೆ – ಸಚಿವ ಶಿವರಾಮ್ ಹೆಬ್ಬಾರ್

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷದವರು ಕೋವಿಡ್ ಗೆ ಒಳಗಾಗಿದ್ದಾರೆ ಎಂದು ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬಣದಿಂದ ಕೋವಿಡ್ ಅಳತೆ ಮಾಡುವುದು ಬೇಡ. ಯಾವುದೇ  ಕಾರಣಕ್ಕೂ ಸಿಎಂ ಯಡಿಯೂರಪ್ಪ ಬದಲಾವಣೆ ಇಲ್ಲ.‌ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದೆಲ್ಲ ಮಾಧ್ಯಮದ ಸೃಷ್ಠಿ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರದ ಬಗ್ಗೆ ಕುಮಾರಸ್ವಾಮಿ ಒಲವು ಹೊಂದಿದ್ದಾರೆ ಅನ್ನೋ ಸಿಪಿ ಯೋಗೇಶ್ವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಹೆಬ್ಬಾರ್, ಯೋಗಿಶ್ವರ್ ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಗೊತ್ತಿಲ್ಲ.

ಸರ್ಕಾರ ನಡೆಸೋಕೆ ಸಿಎಂ ಸಮರ್ಥವಾಗಿದ್ದಾರೆ. ನಾಲ್ಕು ದಶಕಗಳ ಕಾಲ ಸುದೀರ್ಘವಾಗಿ ಪಕ್ಷ ಕಟ್ಟಿದ ಧೀಮಂತ ನಾಯಕ ಯಡ್ಡಿಯೂರಪ್ಪ. ಅವರಿಗೆ ಯಾರಿಂದಲೂ ಉಪದೇಶ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ಯೋಗಿಶ್ವರ ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..?

Sat Aug 1 , 2020
ಕೊರೊನಾ ಸೋಂಕಿತನ ಕುಟುಂಬಕ್ಕೆ ಸಾರ್ವಜನಿಕರು ಸಾಮಾಜಿಕ ಬಹಿಷ್ಕಾರ ಹಾಕಿರುವ ಆರೋಪ ಕೇಲಿಬಂದಿದೆ.ಜಿಲ್ಲೆಯ ಚಾಲುಕ್ಯ ನಗರದಲ್ಲಿರುವ ಸೋಂಕಿತರ ಕುಟುಂಬಕ್ಕೆ ಹಾಲು,ಪತ್ರಿಕೆ ಸೇರಿದಂತೆ ಅಗತ್ಯ ವಸ್ತುಗಳನ್ನು ಮನೆಗೆ ಪೂರೈಸದಂತೆ ಸ್ಥಳೀಯರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರವಾಗಿ ನೋಂದಿರುವ ಕುಟುಂಬಸ್ಥರು ಪ್ರಧಾನಿ ಕಾರ್ಯಾಲಯ ಮುಖ್ಯಮಂತ್ರಿಗಳಿಗೆ,ಆರೋಗ್ಯ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗೆ ಟ್ವೀಟ್ ಮಾಡುವ ಮೂಲಕ ದೂರು ನೀಡಿದ್ದಾರೆ. ಇದುವರೆಗೂ ಮನೆಯಲ್ಲಿ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿದೆ.ಅವರನ್ನು ಮನೆಯ ಮೊದಲ ಮಹಡಿಯಲ್ಲಿ ಪ್ರತ್ಯೇಕವಾಗಿ ಇರಿಸಿದ್ದೇವೆ.ಮಾತ್ರೆ […]

Advertisement

Wordpress Social Share Plugin powered by Ultimatelysocial