ಬೆಂಗಳೂರು : ಉದ್ಯೋಗಾಕಾಂಕ್ಚಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಕೆಪಿಎಸ್ ಸಿ ಅಧಿಸೂಚನೆ ಹೊರಡಿಸಿದೆ.ಹೈದರಾಬಾದ್ ಕರ್ನಾಟಕದ 59 ಹುದ್ದೆಗಳ ಸೇರಿದಂತೆ ಒಟ್ಟು 188 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.ಪ್ರಮುಖ ದಿನಾಂಕಗಳುಅರ್ಜ ಸಲ್ಲಿಸಲು ಪ್ರಾರಂಭಿಕ ದಿನಾಂಕ -28-02-2022ಅರ್ಜಿ ಸಲ್ಲಿಸಲು ಕೊನೆ ದಿನಾಂಕ -30-03-2022ಶುಲ್ಕ ಪಾವತಿಸಲು ಕೊನೆಯ ದಿನಾಂಕ -31-03-2022ವಿದ್ಯಾರ್ಹತೆ :ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ಅಥವಾ ಎನ್ವಿರಾನ್ಮೆಂಟಲ್ ವಿಷಯದಲ್ಲಿ ಬಿಎ ಅಥವಾ ಬಿಟೆಕ್ ಪದವಿ ಪಡೆದಿರಬೇಕು.ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ, ಗರಿಷ್ಟ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ https://bit.ly/3BvqH8 ಭೇಟಿ ನೀಡಬಹುದು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada