ಕೇಂದ್ರ ವರ ಕೊಟ್ಟರು ರಾಜ್ಯ ಸರ್ಕಾರ್ ವರ ಕೊಡಲಿಲ್ಲ ಎನ್ನುವ ಪರಿಸ್ಥಿತಿ ಈಗ ಸ್ಯಾಂಡಲ್ ವುಡ್ ಗೆ ಬಂದಿದೆ. ರಾಜ್ಯದ ಚಿತ್ರಮಂದಿರ ಮಾಲೀಕರು ತಮ್ಮ ಬೇಸರವನ್ನು ಹೊರಹಾಕುತ್ತಿದ್ದಂತೆ, ಸ್ಟಾರ್ ಕಲಾವಿದರು ಕೂಡ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಪೊಗರು ಚಿತ್ರದ ಬಿಡುಗಡೆಯ ತಯಾರಿಯಲ್ಲಿರುವ ಧ್ರುವ ಸರ್ಜಾ ಮತ್ತು ಕೆಜಿಎಫ್- ಚಾಪ್ಟರ್-2 ಚಿತ್ರವನ್ನು ತೆರೆಗೆ ತರಲು ಸಜ್ಜಾಗುತ್ತಿರುವ ಪ್ರಶಾಂತ್ ನೀಲ್ ‘ಮಾರ್ಕೇಟ್ ನಲ್ಲಿ ಗಿಜಿಗಿಜಿ’ ಬಸ್ ನಲ್ಲೂ ರಶ್’ ‘ಚಿತ್ರಮಂದಿರಗಳಿಗೆ ಮಾತ್ರ ಏಕೆ ಶೇಕಡಾ 50 ನಿರ್ಬಂಧ’? ಎಂದು ಟ್ವೀಟ್ ಮಾಡಿದ್ದು ಸಾಕಷ್ಟು ವೈರಲ್ ಆಗಿದೆ.
ಫೆಬ್ರವರಿ 1 ರಿಂದ ಚಿತ್ರಮಂದಿರಗಳು ಪೂರ್ಣ ಸೀಟು ಸಾಮರ್ಥ್ಯದಷ್ಟು ಪ್ರೇಕ್ಷಕರಿಗೆ ಸಿನಿಮಾ ನೋಡಲು ಅವಕಾಶ ನೀಡಬಹುದು ಎಂದು ಕೇಂದ್ರ ಸರ್ಕಾರ ಆದೇಶ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಹೊಸದೊಂದು ಆದೇಶ ಹೊರಡಿಸಿ, ಈ ತಿಂಗಳ ಅಂತ್ಯದವರೆಗೆ 50% ಪ್ರೇಕ್ಷಕರಿಗಷ್ಟೆ ಸಿನಿಮಾ ಮಂದಿರದೊಳಗೆ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದಿದೆ. ರಾಜ್ಯ ಸರ್ಕಾರದ ಹೊಸ ಆದೇಶವು ಈಗಷ್ಟೆ ಹೊರಬಿದ್ದಿದ್ದು , ರಾಜ್ಯದಲ್ಲಿ ಕೊರೊನಾ ಪೂರ್ಣವಾಗಿ ಕಡಿಮೆಯಾಗಿಲ್ಲ, ಜೊತೆಗೆ ಕೊರೊನಾ ಎರಡನೇ ಅಲೆ ಸಹ ಬರುವ ಸಾಧ್ಯತೆ ಇರುವ ಕಾರಣ ಚಿತ್ರಮಂದಿರಗಳು ಯಥಾಸ್ಥಿತಿ ಮುಂದುವರೆಸಬೇಕು ಎಂದು ಆದೇಶ ಮಾಡಿದೆ. ಹೋಟೆಲ್, ರೆಸ್ಟೊರೆಂಟ್, ಮೆಟ್ರೋಗಳಲ್ಲೂ ಕೂಡ ಪೂರ್ಣ ಪ್ರಮಾಣದ ಸೀಟಿಂಗ್ ಸಾಮರ್ಥ್ಯದಷ್ಟು ಜನರಿಗೆ ಅವಕಾಶ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ಫೆಬ್ರವರಿ ತಿಂಗಳಲ್ಲಿ ಕನ್ನಡದ ಕೆಲವು ದೊಡ್ಡ ನಟರ ಸಿನಿಮಾಗಳ ತೆರೆಗೆ ಬರುತ್ತಿವೆ. ಈ ನಡುವೆ ಕೇಂದ್ರ ಸರ್ಕಾರದ ಆದೇಶ ನಿರ್ಮಾಪಕರಿಗೆ, ಸಿನಿ ಪ್ರೇಕ್ಷಕರಿಗೆ ಖುಷಿ ನೀಡಿತ್ತು. ಆದರೆ ರಾಜ್ಯ ಸರ್ಕಾರದ ಹೊಸ ಆದೇಶ ನಿರ್ಮಾಪಕರಿಗೆ ಆತಂಕ ತಂದಿದೆ.
ಇದನ್ನೂ ಓದಿ :ಕಾರು ಹಾಗೂ ಲಾರಿ ನಡುವೆ ಅಪಘಾತ