RSS ಮಾಹಿತಿಯನ್ನು SDPI ಕಾರ್ಯಕರ್ತರಿಗೆ ಸೋರಿಕೆ ಮಾಡಿದ್ದ ಪೊಲೀಸ್​ ಅಧಿಕಾರಿ ಸಸ್ಪೆಂಡ್..!

BIG NEWS: RSS ಮಾಹಿತಿಯನ್ನು SDPI ಕಾರ್ಯಕರ್ತರಿಗೆ ಸೋರಿಕೆ ಮಾಡಿದ್ದ ಪೊಲೀಸ್​ ಅಧಿಕಾರಿ ಸಸ್ಪೆಂಡ್..!

ಎಸ್​ಡಿಪಿಐ ಕಾರ್ಯಕರ್ತರಿಗೆ ಆರ್​ಎಸ್​ಎಸ್​ ಕಾರ್ಯಕರ್ತರ ಖಾಸಗಿ ಮಾಹಿತಿಗಳನ್ನು ಸೋರಿಕೆ ಮಾಡಿದ್ದ ಕೇರಳದ ಪೊಲೀಸ್​ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.‌

ಕರಿಮನ್ನೂರು ಪೊಲೀಸ್​ ಠಾಣೆಯ ಸಿಪಿಓ ಪಿಕೆ ಅನಸ್​ರನ್ನು ಆಂತರಿಕ ತನಿಖೆಗೆ ಒಳಪಡಿಸಿದ ಪೊಲೀಸರು ಪ್ರೈವೇಟ್​ ಚಾಟ್​ ಗ್ರೂಪ್​ಗಳಿಗೆ ಪೊಲೀಸ್​ ಡೇಟಾ ಬೇಸ್​ನಲ್ಲಿದ್ದ ಮಾಹಿತಿಗಳನ್ನು ಸೋರಿಕೆ ಮಾಡಿರೋದು ಸಾಬೀತಾದ ಹಿನ್ನೆಲೆಯಲ್ಲಿ ಅನಸ್​​ರನ್ನು ಅಮಾನತುಗೊಳಿಸಲಾಗಿದೆ.

ಸಿಪಿಓ ಅನಸ್​​ರನ್ನು ಇಡುಕ್ಕಿ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಇದು ದೀರ್ಘ ತನಿಖೆಯ ಬಳಿಕ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿ ಮಧುಸೂಧನ್ ಎಂಬ ಬಸ್ ಕಂಡಕ್ಟರ್ ಮೇಲೆ 6 ಮಂದಿ ಹಲ್ಲೆ ನಡೆಸಿದ ಪ್ರಕರಣದಲ್ಲಿ SDPI ಕಾರ್ಯಕರ್ತರನ್ನು ಡಿಸೆಂಬರ್ 2 ರಂದು ಬಂಧಿಸಲಾಗಿತ್ತು. ಫೇಸ್​ಬುಕ್​​ನಲ್ಲಿ ಕೋಮುವಾದವನ್ನು ಪ್ರಚೋದಿಸುವಂತಹ ಪೋಸ್ಟ್​ ಶೇರ್​ ಮಾಡಿದ್ದಾರೆ ಎಂದು ಆರೋಪಿಸಿ ಬಸ್​ ಕಂಡಕ್ಟರ್​ ಮೇಲೆ ಹಲ್ಲೆ ನಡೆಸಲಾಗಿತ್ತು.

ಬಂಧಿತ ವ್ಯಕ್ತಿ ಕೊಲೆಯ ಪ್ರಮುಖ ಆರೋಪಿಯಾಗಿದ್ದಾನೆ. ಆತ ಆರ್​ಎಸ್​ಎಸ್​ ಕಾರ್ಯಕರ್ತನನ್ನು ಕತ್ತಿಯಿಂದ ಕತ್ತರಿಸಿದ್ದಾನೆ. ಬಂಧಿತ ಆರೋಪಿ ಒಬ್ಬ ಎಸ್​ಡಿಪಿಐ ಕಾರ್ಯಕರ್ತನಾಗಿದ್ದಾನೆ ಎಂದು ಎಸ್ಪಿ ಆರ್​. ವಿಶ್ವನಾಥ್​ ಹೇಳಿದ್ದಾರೆ.

ಈ ನಡುವೆ, ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆಯ ತನಿಖೆ ನಡೆಸುತ್ತಿರುವ ಕೇರಳ ಪೊಲೀಸರು ಪ್ರಕರಣ ಸಂಬಂಧ ಚೆರ್ಪುಳಸ್ಸೆರಿ ಪ್ರದೇಶದ ಎಸ್‌ಡಿಪಿಐ ಕಾರ್ಯಕರ್ತನನ್ನು ಇಂದು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಅಧಿಕಾರಿಗಳ ಎಡವಟ್ಟಿನಿಂದ ರಾಜ್ಯದತ್ತ ಧಾವಿಸಿ ಬರುತ್ತಿದೆ 'ಮಹಾ' ಜಲಾಶಯದ ನೀರು

Wed Dec 29 , 2021
ಕೊಲ್ಹಾಪುರ (ಮಹಾರಾಷ್ಟ್ರ): ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯ ಗೇಟ್ ರಿಪೇರಿ ವೇಳೆ ಅವಘಡ ಸಂಭವಿಸಿದ್ದು, ತಾಂತ್ರಿಕ ದೋಷದಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದುಬಂದಿದೆ. ಸುಮಾರು 18 ಅಡಿಗಳಷ್ಟು ಗೇಟ್ ಎತ್ತರಿಸಿ ಅಧಿಕಾರಿಗಳು ಕಾಮಗಾರಿ ಕೈಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ನದಿಗೆ ಹರಿದು ಬರುತ್ತಿದೆ, ಅಧಿಕಾರಿಗಳ ಎಡವಟ್ಟಿನಿಂದ ನದಿ ತೀರದ ಜನರು ಕಂಗೆಟ್ಟು ಹೋಗಿದ್ದು, ಇಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ವೇದಗಂಗಾ ನದಿ ತೀರದ […]

Advertisement

Wordpress Social Share Plugin powered by Ultimatelysocial