ಆರು ವರ್ಷದಿಂದ ಪ್ರೀತಿಸಿದ್ದ ಜೋಡಿಯೊಂದು ಒಂದೇ ವೇಲ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಇಬ್ಬರ ಪ್ರೀತಿಯ ವಿಷಯ ತಿಳಿದಿದ್ದ ಎರಡೂ ಕುಟುಂಬಗಳು ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದರು.
ಕುಟುಂಬಸ್ಥರಿಂದ ಒಪ್ಪಿಗೆ ಸಿಕ್ಕ ನಂತರ ಜೋಡಿ ಕೈ ಕೈ ಹಿಡಿದುಕೊಂಡು ಸುತ್ತಾಡಿದ್ದರು. ಆದ್ರೆ ಇವರಿಬ್ಬರ ಪ್ರೀತಿಯಲ್ಲಿ ಬಿರುಕು ಮೂಡಿಸಿದ್ದು ಒಂದು ಪ್ರಕರಣ. ಒಂದು ತಿಂಗಳ ಹಿಂದೆ ಯುವಕನ ವಿರುದ್ಧ ದಾಖಲಾದ ಒಂದು ಪ್ರಕರಣ ಇಂದು ಇಬ್ಬರ ಜೀವವನ್ನು ಪಡೆದುಕೊಂಡಿದೆ. ಇತ್ತ ಮಕ್ಕಳನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.
ದರ್ಶನ್ ಮತ್ತು ಪೂರ್ವಿಕಾ ಆತ್ಮಹತ್ಯೆಗೆ ಶರಣಾದ ಜೋಡಿ. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಕಲ್ಲುಗುಡ್ಡೆ ಗ್ರಾಮದ ದರ್ಶನ್ ಹಾಗೂ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನ್ಬಾಳು ಗ್ರಾಮದ ಪೂರ್ವಿಕಾ ಆಲ್ದೂರು ಸಮೀಪದ ಗುಲ್ಲನ್ಪೇಟೆಯ ಸತ್ತಿಹಳ್ಳಿಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.
ಮದುವೆಗೆ ಒಪ್ಪಿಗೆ ನೀಡಿದ್ದ ಕುಟುಂಬಸ್ಥರು
ಮಂಗಳೂರಿಗೆ ಹೋಗಿ ಬರುತ್ತಿದ್ದ ದರ್ಶನ್ಗೆ ಮಂಗಳೂರಿನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಪೂರ್ವಿಕಾ ನಡುವೆ ಸ್ನೇಹವಾಗಿತ್ತು. ಇಬ್ಬರ ಸ್ನೇಹ ಕೆಲವೇ ದಿನಗಳಲ್ಲಿ ಪ್ರೀತಿಯಾಗಿ ಬದಲಾಗಿತ್ತು. ವಿಷಯ ಮನೆಯವರಿಗೆ ತಿಳಿದು 5 ವರ್ಷದ ಬಳಿಕ ಮದುವೆ ಮಾಡ್ತೀವಿ ಎಂದು ಭರವಸೆ ನೀಡಿದ್ದರು.
ಪ್ರೇಮಿಗಳ ಮಧ್ಯೆ ಬಿರುಕುಒಂದು ತಿಂಗಳ ಹಿಂದೆ ದರ್ಶನ್ ವಿರುದ್ಧ ಚಿಕ್ಕಮಗಳೂರಿನ ಮಲ್ಲಂದೂರು ಠಾಣೆಯಲ್ಲಿ ದಾಖಲಾದ ಅದೊಂದು ಕೇಸ್ ಪ್ರೇಮಿಗಳ ಮಧ್ಯೆ ಬಿರುಕು ಮೂಡಿಸಿತ್ತು.
ದರ್ಶನ್ನಿಂದ ತನಗೆ ಮೋಸ ಆಗಿದ್ದು, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ ಎಂದು ಯುವತಿಯೊಬ್ಬಳು ದೂರು ದಾಖಲಿಸಿದ್ದಳು. ಈ ವಿಚಾರ ತಿಳಿಯುತ್ತಿದ್ದಂತೆ ಪೂರ್ವಿಕಾ ಗೆಳೆಯ ದರ್ಶನ್ ವಿರುದ್ಧ ರೆಬೆಲ್ ಆಗದ್ದಳು. ಆದ್ರೆ ಈ ಪ್ರಕರಣದಲ್ಲಿ ಯಾವುದೇ ತಪ್ಪಿಲ್ಲ. ಬೇಕಾದರೆ ಡಿಎನ್ಎ ಟೆಸ್ಟ್ ಮಾಡಿಸಿ ಎಂದು ದರ್ಶನ್ ಹೇಳಿಕೊಂಡಿದ್ದನು.
ಮೂರು ದಿನದ ಹಿಂದೆ ಪೂರ್ವಿಕಾ ದರ್ಶನ್ನನ್ನು ಭೇಟಿಯಾಗಿದ್ದಾಳೆ. ಇಬ್ಬರ ನಡುವೆ ಏನಾಯ್ತೋ ಗೊತಿಲ್ಲ. ಅಪ್ಪ-ಅಮ್ಮನಿಗೆ ಕ್ಷಮಿಸಿ, ಅವನನ್ನ ಬಿಟ್ಟು ಇರೋಕೆ ಆಗ್ತಿಲ್ಲ ಎಂದು ವಾಯ್ಸ್ ಮೆಸೇಜ್ ಕಳಿಸಿ ಪೂರ್ವಿಕಾ ತನ್ನ ಪ್ರೇಮಿ ಜೊತೆ ನೇಣಿಗೆ ಕೊರಳೊಡ್ಡಿದ್ದಾಳೆ.
ದರ್ಶನ್ ಮತ್ತು ಪೂರ್ವಿಕಾ ಆತ್ಮಹತ್ಯೆಗೆ ಶರಣಾದ ಜೋಡಿ. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಕಲ್ಲುಗುಡ್ಡೆ ಗ್ರಾಮದ ದರ್ಶನ್ ಹಾಗೂ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನ್ಬಾಳು ಗ್ರಾಮದ ಪೂರ್ವಿಕಾ ಆಲ್ದೂರು ಸಮೀಪದ ಗುಲ್ಲನ್ಪೇಟೆಯ ಸತ್ತಿಹಳ್ಳಿಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.
ಮದುವೆಗೆ ಒಪ್ಪಿಗೆ ನೀಡಿದ್ದ ಕುಟುಂಬಸ್ಥರು
ಮಂಗಳೂರಿಗೆ ಹೋಗಿ ಬರುತ್ತಿದ್ದ ದರ್ಶನ್ಗೆ ಮಂಗಳೂರಿನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಪೂರ್ವಿಕಾ ನಡುವೆ ಸ್ನೇಹವಾಗಿತ್ತು. ಇಬ್ಬರ ಸ್ನೇಹ ಕೆಲವೇ ದಿನಗಳಲ್ಲಿ ಪ್ರೀತಿಯಾಗಿ ಬದಲಾಗಿತ್ತು. ವಿಷಯ ಮನೆಯವರಿಗೆ ತಿಳಿದು 5 ವರ್ಷದ ಬಳಿಕ ಮದುವೆ ಮಾಡ್ತೀವಿ ಎಂದು ಭರವಸೆ ನೀಡಿದ್ದರು.
ಪ್ರೇಮಿಗಳ ಮಧ್ಯೆ ಬಿರುಕುಒಂದು ತಿಂಗಳ ಹಿಂದೆ ದರ್ಶನ್ ವಿರುದ್ಧ ಚಿಕ್ಕಮಗಳೂರಿನ ಮಲ್ಲಂದೂರು ಠಾಣೆಯಲ್ಲಿ ದಾಖಲಾದ ಅದೊಂದು ಕೇಸ್ ಪ್ರೇಮಿಗಳ ಮಧ್ಯೆ ಬಿರುಕು ಮೂಡಿಸಿತ್ತು.
ದರ್ಶನ್ನಿಂದ ತನಗೆ ಮೋಸ ಆಗಿದ್ದು, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ ಎಂದು ಯುವತಿಯೊಬ್ಬಳು ದೂರು ದಾಖಲಿಸಿದ್ದಳು. ಈ ವಿಚಾರ ತಿಳಿಯುತ್ತಿದ್ದಂತೆ ಪೂರ್ವಿಕಾ ಗೆಳೆಯ ದರ್ಶನ್ ವಿರುದ್ಧ ರೆಬೆಲ್ ಆಗದ್ದಳು. ಆದ್ರೆ ಈ ಪ್ರಕರಣದಲ್ಲಿ ಯಾವುದೇ ತಪ್ಪಿಲ್ಲ. ಬೇಕಾದರೆ ಡಿಎನ್ಎ ಟೆಸ್ಟ್ ಮಾಡಿಸಿ ಎಂದು ದರ್ಶನ್ ಹೇಳಿಕೊಂಡಿದ್ದನು.
ಮೂರು ದಿನದ ಹಿಂದೆ ಪೂರ್ವಿಕಾ ದರ್ಶನ್ನನ್ನು ಭೇಟಿಯಾಗಿದ್ದಾಳೆ. ಇಬ್ಬರ ನಡುವೆ ಏನಾಯ್ತೋ ಗೊತಿಲ್ಲ. ಅಪ್ಪ-ಅಮ್ಮನಿಗೆ ಕ್ಷಮಿಸಿ, ಅವನನ್ನ ಬಿಟ್ಟು ಇರೋಕೆ ಆಗ್ತಿಲ್ಲ ಎಂದು ವಾಯ್ಸ್ ಮೆಸೇಜ್ ಕಳಿಸಿ ಪೂರ್ವಿಕಾ ತನ್ನ ಪ್ರೇಮಿ ಜೊತೆ ನೇಣಿಗೆ ಕೊರಳೊಡ್ಡಿದ್ದಾಳೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us: