ಮೈಸೂರು: ನನ್ನ ಮೇಲಿನ ದ್ವೇಷಕ್ಕಾಗಿ ಜನರಿಗೆ ತೊಂದರೆ ಕೊಡಬೇಡಿ ಎಂದು ಬಂಧಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಪಾದರಾಯನಪುರ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದ ಪ್ರಕರಣದ ಕುರಿತು ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಾಗ ಅಲೋಕ್ ಮೋಹನ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಬೇಕೆಂದು ಪ್ರಯತ್ನಿಸಿದ್ದರು. ಅವರ ಹಿನ್ನೆಲೆ ಗೊತ್ತಿದ್ದ ಕಾರಣಕ್ಕೆ ನಾನು ನೇಮಕ ಮಾಡಲಿಲ್ಲ. ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ಹೀಗೆಲ್ಲ ಮಾಡಿದ್ದಾರೆ. ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದರೆ ಕೊಟ್ಟಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು. ನಾನು ಈಗಾಗಲೇ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಹೇಳಿದ್ದೇನೆ. ಇಂತಹ ಅಧಿಕಾರಿಗಳಿಂದಲೇ ಸರ್ಕಾರ ಸಾರ್ವಜನಿಕವಾಗಿ ಪದೇ ಪದೇ ಮುಜುಗರ ಅನುಭವಿಸುತ್ತಿದೆ. ಪ್ರತಿಪಕ್ಷ, ಮಾಧ್ಯಮ ಸೇರಿದಂತೆ ಎಲ್ಲರೂ ಸರ್ಕಾರಕ್ಕೆ ಬೆಂಬಲ ಕೊಡುತ್ತಿದ್ದಾರೆ. ಆದರೆ ಸರ್ಕಾರ ಪದೇ ಪದೇ ತಪ್ಪು ಮಾಡಿದರೆ ಬೆಂಬಲ ನಿಲ್ಲಿಸಿ, ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ
Please follow and like us: