ಚುನಾವಣೆ ಹತ್ತಿರ ಬರುತ್ತಿರುವ ಬೆನ್ನಲೆ ಕಲ್ಪತರು ನಾಡು ತುಮಕೂರಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತ ಕಾರ್ಯಕರ್ತರ ಪಕ್ಷಾಂತರ ಪರ್ವ ನಡೆಯುತ್ತಿದೆ, ಇದರ ಬೆನ್ನಲ್ಲೆ ಗುಬ್ಬಿ ಜೆಡಿಎಸ್ ಉಚ್ಚಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೆ ಇದೀಗ ಮೂಲಗಳ ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ಎಸ್.ಆರ್.ಶ್ರೀನಿವಾಸ್ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೆ ತುಮಕೂರು ಜಿಲ್ಲೆ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಕೇಸರಿ ಬಿಳಿ ಹಸಿರು ಚಿಹ್ನೆಯ ಪೋಟೋಗಳನ್ನು ಬಳಸುತ್ತಿದ್ದು ಕಾಂಗ್ರೆಸ್ ಟಿಕೇಟ್ ಪಕ್ಕಾ ಎನ್ನುವ ಅನುಮಾನಗಳಿಗೆ ಇಂಬೂ ಕೊಡುತ್ತಿದೆ. ಈ ಹಿಂದೆ ಜೆಡಿಎಸ್ ನಲ್ಲಿ ಮೂರು ಭಾರಿ ಗೆದ್ದು ಶಾಸಕರಾಗಿದ್ದ ಎಸ್.ಆರ್.ಶ್ರೀನಿವಾಸ್ ಸ್ವಪಕ್ಷದವರ ಮೇಲೆ ವಾಗ್ಯುದ್ದ ನಡೆಸಿದ್ದರು. ನಂತರ ನಡೆದ ರಾಜಕೀಯ ವಿದ್ಯಮಾನಗಳ ಪರಿಣಾಮ ಹಾಗೂ ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾರಣಕ್ಕೆ ಜೆಡಿಎಸ್ ಪಕ್ಷದಿಂದ ಉಚ್ಛಾಟನೆಗೊಂಡಿದ್ದರು. ಉಚ್ಚಾಟನೆ ಬಳಿಕ ಇದೀಗ ಕಾಂಗ್ರೆಸಿಗರ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿರು ಶ್ರೀನಿವಾಸ್, ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆಹಾಕಿದ್ದರು. ಇನ್ನು ಜಿಲ್ಲೆಯ ಕಾಂಗ್ರೆಸ್ ಮುಖಂಡರಾದ ಕೆ.ಎನ್.ರಾಜಣ್ಣ, ಡಾ.ಜಿ.ಪರಮೇಶ್ವರ್ ಜೊತೆಯಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಕಾಂಗ್ರೆಸ್ ಪಕ್ಷ ಸೇರ್ಪಡೆ ಹಾಗೂ ಟಿಕೇಟ್ ಪಕ್ಕಾ ಎನ್ನುವ ಸಂದೇಶವನ್ನು ಶಾಸಕ ಶ್ರೀನಿವಾಸ್ ರವಾನಿಸಿದ್ದಾರೆ. ಇನ್ನು ಗುಬ್ಬಿ ಕಾಂಗ್ರೆಸ್ ನಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಅಸಮಾಧಾನದ ಹೊಗೆಯಾಡುತ್ತಿದ್ದು, ಶೀಘ್ರವೇ ಗುಬ್ಬಿ ಅಸಮಾಧಾನ ಶಮನಗಳಿಸಲು ರಾಜ್ಯ ನಾಯಕರು ಎಂಟ್ರಿಯಾಗಲಿದ್ದಾರೆ ಎನ್ನಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada