ಲಖನೌ: ಕೊರೊನಾ ಪತ್ತೆ ಪರೀಕ್ಷೆಗೆ ಒಳಗಾಗದೆ ತಲೆಮರೆಸಿಕೊಂಡು ಓಡಾಡುವ ತಬ್ಲಿಗಿ ಜಮಾತ್ ಸದಸ್ಯರ ಕುರಿತು ಮಾಹಿತಿ ನೀಡುವವರಿಗೆ ರೂ.೧೧ ಸಾವಿರ ನಗದು ಬಹುಮಾನ ನೀಡುವುದಾಗಿ ಉತ್ತರ ಪ್ರದೇಶದ ಸಲೀಮ್ಪುರದ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಘೋಷಿಸಿದ್ದಾರೆ. ದೆಹಲಿಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದಿದ್ದ ತಬ್ಲಿಗಿ ಜಮಾತ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ ಅನೇಕರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ದೇಶದ ನಾನಾ ಕಡೆಗಳಿಂದ ಜನ ಆ ಸಮಾವೇಶದಲ್ಲಿ ಭಾಗವಹಿಸಿದ್ದರು. ಪರಿಣಾಮವಾಗಿ ದೇಶದ ವಿವಿಧೆಡೆಗಳಿಗೆ ಸೋಂಕು ಹರಡಿದೆ. ಅಂತಹವರು ತಮ್ಮ ಪ್ರಯಾಣದ ಇತಿಹಾಸದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಸಂಸದರು ಹೇಳಿದ್ದಾರೆ. ಒಂದು ವೇಳೆ ಮಾಹಿತಿ ನೀಡದೇ ಇದ್ದಲ್ಲಿ ಅಂತಹವರ ಬಗ್ಗೆ ತಿಳಿಸುವವರಿಗೆ ನಗದು ಬಹುಮಾನ ನೀಡುವುದಾಗಿಯೂ ಹೇಳಿದ್ದಾರೆ.
ಮಾಹಿತಿ ನೀಡಿದವರಿಗೆ ೧೧ ಸಾವಿರ ಬಹುಮಾನ
Please follow and like us: