ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆ ಆಗಿದೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಚೆನ್ನೈನಿಂದ 500 ಕಿ.ಮೀ ದೂರದಲ್ಲಿರುವ ವಿರುಧುನಗರದಲ್ಲಿ ಇಂದು ಮಧ್ಯಾಹ್ನ 1:30ರ ಸುಮಾರಿಗೆ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ರಭಸಕ್ಕೆ ಸ್ಥಳದಲ್ಲೇ 6 ಜನರು ಸಜೀವ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೆಚ್ಚುವರಿಯಾಗಿ 9 ಜನರು ಮೃತಪಟ್ಟಿದ್ದಾರೆ.ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಇಡೀ ಕಾರ್ಖಾನೆಯೇ ಹೊತ್ತಿ ಉರಿದಿದೆ. ಪಟಾಕಿಗಳು ಸಿಡಿಯುತ್ತಿವೆ. ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ದಳದವರು ಹರಸಾಹಸ ಪಟ್ಟಿದ್ದರು. ಅಂದಹಾಗೆ, ಘಟನೆಗೆ ಕಾರಣವೇನು, ಎಷ್ಟು ಮಂದಿ ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ:ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದ ಪೋಲೀಸರು