ಮೊನ್ನೆಯಷ್ಟೇ ಧ್ರುವ ಸರ್ಜಾ ನಟನೆಯ ಮಾರ್ಟೀನ್ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಟೀಸರ್ ಅನ್ನು ಟಿಕೆಟ್ ಖರೀದಿಸಿ ನೋಡುವಂತಹ ವ್ಯವಸ್ಥೆಯನ್ನು ಚಿತ್ರತಂಡ ಮಾಡಿತ್ತು. ಅದರಿಂದ ಬಂದ ಹಣವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗಿಸುವುದಾಗಿ ನಿರ್ದೇಶಕ ಎ.ಪಿ.ಅರ್ಜುನ್ ತಿಳಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿರುವ ನಿರ್ದೇಶಕ ಎ.ಪಿ.ಅರ್ಜುನ್ ಟೀಸರ್ ನಿಂದ ಬಂದ ಹಣವನ್ನು ಗೋಶಾಲೆಗಳಿಗೆ ನೀಡುವುದಾಗಿ ತಿಳಿಸಿದ್ದಾರೆ.ಕನ್ನಡದ ಮತ್ತೊಂದು ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ಟೀಸರ್ ಮೊನ್ನೆ ಬಿಡುಗಡೆಯಾಗಿದ್ದು, ಟೀಸರ್ ನೋಡಿದ ಪರಭಾಷಾ ನಟರು ಹಾಗೂ ತಂತ್ರಜ್ಞರು ಅಭಿನಂದನೆಯ ಸುರಿಮಳೆಗೈದಿದ್ದಾರೆ.ಮಾರ್ಟಿನ್ ಸಾಹಸ ಪ್ರಧಾನ ಸಿನಿಮಾ ಎನ್ನುವುದು ಟೀಸರ್ ನ ಪ್ರತಿ ಫ್ರೇಮ್ ಹೇಳುತ್ತದೆ. ಪಾಕಿಸ್ತಾನದ ಜೈಲಿನಲ್ಲಿ ಬಂಧಿಯಾಗಿರುವ ನಾಯಕ. ಆ ನಾಯಕನ ಸುತ್ತ ಹೆಣೆದಿರುವ ಕಥೆ ಮಾರ್ಟಿನ್ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada