ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ನಟೋರಿಯಸ್ ರೌಡಿಶೀಟರ್ ಸೈಕಲ್ ರವಿ ಪೊಲೀಸ್ ಠಾಣೆ ಬಳಿ ದಿಢೀರ್ ಪ್ರತ್ಯಕ್ಷವಾಗಿದ್ದಾರೆ. ಸೈಕಲ್ ರವಿ ತಮ್ಮ ವಕೀಲರೊಂದಿಗೆ ವಿ.ವಿ ಪುರಂ ಠಾಣೆಗೆ ಭೇಟಿಕೊಟ್ಟಿದ್ದಾರೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ಕೆಲ ಕುಖ್ಯಾತ ದುಷ್ಕರ್ಮಿಗಳು ಸೈಕಲ್ ರವಿ ಹತ್ಯೆಗೆ ಸ್ಕೆಚ್ ಹಾಕಿದ್ದರು.
ಅಷ್ಟೇ ಅಲ್ಲದೇ ಇತ್ತೀಚೆಗೆ ರಾಬರ್ಟ್ ಸಿನಿಮಾ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಹತ್ಯೆಗೂ ಸಂಚು ಸಹ ರೂಪಿಸಿದ್ದರು. ಪ್ರಕರಣ ಸಂಬಂಧ ಸೈಕಲ್ ರವಿ ವಿಚಾರಣೆಗೆ ಪೊಲೀಸರು ಹುಡುಕಾಟ ನಡೆಸಿದ್ದು ಪೊಲೀಸರ ಕೈಗೆ ಸಿಗದೆ ಸೈಕಲ್ ರವಿ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರಿಗೆ ಆತನೇ ಬಂದು ಶರಣಾಗಿರುವುದು ಕೆಲ ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ.
ಇದನ್ನೂ ಓದಿ : ಸಿಡಿ ವಿಚಾರದ ಪ್ರಶ್ನೆಗೆ ಸಿದ್ದು ಗಪ್-ಚುಪ್.!