ಉಡುಪಿಗೆ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀಯ ಸ್ವಾಮಿಗಳು ಆಗಮಿಸಿದ್ದಾರೆ. ದ್ವೈತ ಮತದ ಮೂಲ ಕೇಂದ್ರವಾದ ಉಡುಪಿಯಲ್ಲಿ ಅದ್ವೈತ ಮತದ ಹಿರಿಯ ಸ್ವಾಮೀಜಿ ಒಬ್ಬರು ಆಗಮಿಸುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಶಾರದಾ ಮಂದಿರದ ನೂತನ ಕೃಷ್ಣ ಶಿಲೆಯ ವಿಗ್ರಹದ ಪ್ರತಿಷ್ಠಾಪನೆ ನೆರವೇರಿಸಿದ್ದಾರೆ. ಇದೇ ಮೊದಲ ಬಾರಿಗೆ ಒಂದುವರೆ ಸಾವಿರ ವರ್ಷಗಳ ಇತಿಹಾಸವಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲಕ್ಕೂ ಭೇಟಿ ನೀಡಲಿದ್ದಾರೆ. ಶ್ರೀಗಳ ಈ ಭೇಟಿಯ ಸಂದರ್ಭದಲ್ಲಿ ಶೃಂಗೇರಿ ಮಠದ ಶಾಖಾ ಮಠಕ್ಕೂ ಸ್ಥಳ ಪರಿಶೀಲನೆ ನಡೆಸಿ ಅಂತಿಮಗೊಳಿಸಲಿದ್ದಾರೆ. ಶೃಂಗೇರಿ ಶ್ರೀಗಳನ್ನು ವೈಭವದ ಮೆರವಣಿಗೆಯಲ್ಲಿ ಉಡುಪಿಗೆ ಬರಮಾಡಿಕೊಳ್ಳಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada