ದೇಶದಲ್ಲಿ ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ಹಲವಾರು ರೈತರು ಪ್ರಯೋಜನ ಪಡೆದಿದ್ದು, ಇದು ಕೃಷಿಯೋಗ್ಯ ಭೂಮಿಯನ್ನು ಹೊಂದಿರುವ ದೇಶದ ಎಲ್ಲ ಭೂಹಿಡುವಳಿ ರೈತ ಕುಟುಂಬಗಳಿಗೆ ಹಣಕಾಸಿನ ನೆರವನ್ನು ನೀಡುತ್ತಿದೆ. ಈ ಯೋಜನೆಯಡಿ ಪ್ರತಿ ಹಣಕಾಸು ವರ್ಷದಲ್ಲಿ ತಲಾ 2000 ರೂ.ನಂತೆ ಮೂರು ಕಂತುಗಳಲ್ಲಿ ಅಂದರೆ ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಹಾಗೂ ಡಿಸೆಂಬರ್-ಮಾರ್ಚ್ ಅವಧಿಗೆ ಹಣವನ್ನು ಪಾವತಿಸಲಾಗುತ್ತದೆ.ಈ ಯೋಜನೆಯಲ್ಲಿ ನೇರ ಲಾಭ ವರ್ಗಾವಣೆ (ಡಿಬಿಟಿ) ವ್ಯವಸ್ಥೆಯಡಿ ದೇಶದೆಲ್ಲೆಡೆಯಿರುವ ಅರ್ಹ ರೈತ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಒಟ್ಟು 6000 ರೂಪಾಯಿಯನ್ನು ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಫಲಾನುಭವಿಗಳು ತಮ್ಮ ಹೆಸರನ್ನು ಆಧಾರ್ನಲ್ಲಿರುವಂತೆ ಪಿಎಂ ಕಿಸಾನ್ನಲ್ಲಿ ತಿದ್ದುಪಡಿ ಮಾಡಬಹುದು. ಆಧಾರ್ನಂತೆ ಹೆಸರು ಬದಲಿಸುವ ಕುರಿತು ಪಿಎಂ ಕಿಸಾನ್ ಫಲಾನುಭವಿಗಳಿಗೆ ಹಂತ ಹಂತದ ಮಾಹಿತಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada