ಚಿಕ್ಕೋಡಿ ಸಂಸದ ಅಣ್ಣಾಸಾಬ ಜೊಲ್ಲೆ ಅವರ ಕಾರಿಗೆ ಮಾಜಿ ಡಿಸಿಎಮ್ ಲಕ್ಷ್ಮಣ ಸವದಿ ಅವರ ಬೆಂಬಲಿಗರು ಮುತ್ತಿಗೆ ಹಾಕಿದ ಪ್ರಸಂಗ ಜರುಗಿದೆ. ಇಂದು ಅಥಣಿಯ ಲಕ್ಷ್ಮಣ ಸವದಿ ಅವರ ನಿವಾಸಕ್ಕೆ ಆಗಮಿಸಿ ಸುಮಾರು ಎರಡು ಗಂಟೆಗಳ ಕಾಲ ಸವದಿ ಅವರ ಜೊತೆ ಚರ್ಚಿಸಿ ಮರಳುವ ವೇಳೆ ಸವದಿ ಅವರ ಕಾರ್ಯಕರ್ತರು ಬಿಜೆಪಿಗೆ ಧಿಕ್ಕಾರ, ಹೈಕಮಾಂಡ್ ಗೆ ದಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸುತ್ತಾ ಜೊಲ್ಲೆ ಅವರ ಕಾರಿಗೆ ಮುತ್ತಿಗೆ ಹಾಕಿದರು.
ಮುತ್ತಿಗೆ ಹಾಕಿದ ಕಾರ್ಯಕರ್ತರನ್ನು ಚದುರಿಸಲು ಪೋಲಿಸರು ಹರಸಾಹಸ ಪಟ್ಟರು, ಬೆಳಿಗ್ಗೆ ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ ರಾಜೇಶ ನೇರ್ಲಿ ಅವರ ಕಾರಿಗೂ ಕೂಡ ಮುತ್ತಿಗೆ ಹಾಕಿದ್ದರು.. ಅನಂತರ ಮಾಧ್ಯಮದವರ ಜೊತೆ ಮಾತನಾಡಿ ಸವದಿ ಅವರು ಪಕ್ಷದಲ್ಲಿ ಉಳೊಯುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
https://play.google.com/store/apps/details?id=com.speed.newskannada