ಸಾರಿಗೆ ನೌಕರರ ಮುಷ್ಕರವಿದ್ದರೂ ಕೆಲವು ನೌಕರರು ಮುಷ್ಕರವನ್ನು ಧಿಕ್ಕರಿಸಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಅದೇ ರೀತಿ ಬೆಂಗಳೂರಿನಿಂದ ಮೈಸೂರು ಕಡೆಗೆ ರಾಜಹಂಸ ಬಸ್ ಹೊರಟಿತ್ತು. ಈ ಸಂದರ್ಭದಲ್ಲಿ ಸಿಕ್ಕಿದ್ದೇ ಛಾನ್ಸ್ ಎಂದುಕೊಂಡ ಮೈಸೂರು ಜಿಲ್ಲೆ ಹುಣಸೂರು ತಾಲೂಕು ಮೂಲದ ರವಿ ಎಂಬಾತ ಬಸ್ಸನ್ನು ತಡೆಯಲು ಪ್ರಯತ್ನಿಸಿದ. ಇದರಿಂದ ಸಿಟ್ಟಿಗೆದ್ದ ಬಸ್ ಪ್ರಯಾಣಿಕರು ಕೆಳಕ್ಕೆ ಇಳಿದು ಅವನಿಗೆ ಗೂಸಾ ನೀಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿ ಬಳಿ ಘಟನೆ ನಡೆದಿದ್ದು, ಇದೀಗ ಭಾರಿ ವೈರಲ್ ಆಗಿದೆ. ಸ್ಥಳಕ್ಕೆ ಭೇಟಿ ನೀಡಿ ರವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಟ್ಟಿಗೆದ್ದ ಬಸ್ ಪ್ರಯಾಣಿಕರಿಂದ ರವಿಗೆ ಬಿತ್ತು ಗೂಸ.!
Please follow and like us: