ಮೈಸೂರು, ಅಕ್ಟೋಬರ್ 6: ನಾಡಹಬ್ಬ ದಸರಾ ಹಿನ್ನಲೆ ಹಾಗೂ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗಾಗಿ ಆಗಮಿಸಿದ ಮಾಜಿ ಸಿಎಂ ಎಸ್.ಎಂ. ಕೃಷ್ಣರನ್ನು ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ನಗರದ ಮೈಸೂರು- ಬೆಂಗಳೂರು ಮುಖ್ಯರಸ್ತೆಯ ಕೊಲಂಬಿಯಾ ಏಷ್ಯಾ ಜಂಕ್ಷನ್ ಬಳಿ ಎಸ್.ಎಂ. ಕೃಷ್ಣ ಆಗಮಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಇತರ ಗಣ್ಯರು ಹೂಗುಚ್ಛ ನೀಡಿ, ಆತ್ಮೀಯವಾಗಿ ಸ್ವಾಗತಿಸಿದರು. ಉತ್ತರ ಪ್ರದೇಶ ಪಾಕಿಸ್ತಾನದಲ್ಲಿದೆಯೇ: ಶಿವಸೇನೆ ಆಕ್ರೋಶ ಈ ಬಾರಿಯ ಮೈಸೂರು ದಸರಾ ಉದ್ಘಾಟಕರ ಸ್ವಾಗತದ ವೇಳೆ ಡೊಳ್ಳು ಕುಣಿತ, ಕಂಸಾಳೆ, ವೀರಭದ್ರ ಕುಣಿತದ ಕಲಾವಿದರ ತಂಡ ಮೆರಗು ನೀಡಿತು. ಈ ವೇಳೆ ಶಾಸಕ ಜಿ.ಟಿ. ದೇವೇಗೌಡ, ಎಲ್. ನಾಗೇಂದ್ರ, ಎಂಎಲ್ಸಿ ಎಚ್. ವಿಶ್ವನಾಥ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಮೇಯರ್ ಸುನಂದಾ ಪಾಲನೇತ್ರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದ್ದರು.
ದಸರಾ ಉದ್ಘಾಟನೆಗಾಗಿ ಮೈಸೂರಿಗೆ ಆಗಮಿಸಿದ ಎಸ್.ಎಂ. ಕೃಷ್ಣರಿಗೆ ಅದ್ಧೂರಿ ಸ್ವಾಗತ
Please follow and like us: