ಬೆಂಗಳೂರು: ಇತ್ತೀಚೆಗೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿರುವ ಘಟನೆ ಕುರಿತಂತೆ ನಟ ಶಿವರಾಜ್ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ‘ಮತಬ್ಯಾಂಕ್ಗಾಗಿ ಸರ್ಕಾರ ಸುಮ್ಮನೆ ಕುಳಿತುಕೊಳ್ಳಬಾರದು.
ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ನಮ್ಮ ಭಾಷೆಗಾಗಿ ಪ್ರಾಣ ಕೊಡಲೂ ನಾವು ಸಿದ್ಧ’ ಎಂದಿದ್ದಾರೆ.
ನಟ ಧನಂಜಯ್ ಅವರು ನಟಿಸಿರುವ ‘ಬಡವ ರಾಸ್ಕಲ್’ ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ಕುಮಾರ್, ‘ಧ್ವಜ ಸುಟ್ಟ ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಟ್ವೀಟ್ ಮಾಡಿದೆ. ಟ್ವೀಟ್ ಮಾಡುವುದು ಈಗ ಫ್ಯಾಷನ್ ಆಗಿದೆ. ಕೇವಲ ಟ್ವೀಟ್ ಮಾಡುವುದರಿಂದ ಪ್ರಯೋಜನವಿಲ್ಲ. ನನಗೇನೂ ಸಾಯಬೇಕೆಂಬ ಆಸೆ ತಾಯಾಣೆಗೂ ಇಲ್ಲ. ಇನ್ನೂ ನೂರು ವರ್ಷ ಬದುಕಬೇಕೆಂದು ಆಸೆ ಪಡುತ್ತೇನೆ. ಜೀವ ಎನ್ನುವುದು ಒಂದು ಕೊಡುಗೆ. ಆದರೆ ನಮ್ಮ ಭಾಷೆಗಾಗಿ ಪ್ರಾಣ ಕೊಡಲೂ ನಾವು ಸಿದ್ಧರಿದ್ದೇವೆ’ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada