ಚಹಾ ಕೊಟ್ಟು ಪ್ರಜ್ಞೆ ತಪ್ಪಿಸಿ ಪ್ರಿಯಕರನೊಂದಿಗೆ ಪರಾರಿ!

ಲಕ್ನೋ : ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಚಹಾದಲ್ಲಿ ಪ್ರಜ್ಞೆತಪ್ಪಿಸುವ ಮದ್ದು ಬೆರೆಸಿದ ವಧು, ಮನೆಯಲ್ಲಿರುವ ಚಿನ್ನಾಭರಣದೊಂದಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ.

ಡಿಸೆಂಬರ್ 18 ರಂದು ಮದುವೆ ನಿಗದಿಯಾಗಿತ್ತು. ಡಿಸೆಂಬರ್ 17 ರಂದು, ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದ ಕುಟುಂಬ ಸದಸ್ಯರೆಲ್ಲರಿಗೂ ಕುಡಿಯಲು ಚಹಾವನ್ನು ನೀಡಿದ್ದಾಳೆ. ಕುಟುಂಬಸ್ಥರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಯುವತಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾಳೆ.

ಮದುವೆಗೆ ಒಂದು ದಿನ ಬಾಕಿ ಇರುವಾಗ ಅವಳು ತನ್ನ ಪ್ರೇಮಿಯೊಂದಿಗೆ ಓಡಿಹೋಗಿದ್ದಾಳೆ. ಕುಟುಂಬಸ್ಥರು ಎಚ್ಚರಗೊಂಡು ನೋಡಿದ್ದಾಗ ವಧು ಕಾಣದೆ ಇರುವುದರಿಂದ ಆತಂಕಗೊಂಡು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕುಟುಂಬದ ಕೆಲವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 1.5 ಲಕ್ಷ ರೂಪಾಯಿ ಹಾಗೂ ಬೆಲೆಬಾಳುವ ಚಿನ್ನಾಭರಣಗಳೊಂದಿಗೆ ಯುವತಿ ಪರಾರಿಯಾಗಿದ್ದಾಳೆ ಎಂದು ವಧುವಿನ ಕುಟುಂಬಸ್ಥರು ಯುವತಿಯ ವಿರುದ್ಧ ವರ ವಂಚನೆ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತ್ತೆ ಸುದ್ದಿಗೆ ಬಂದ ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್‌

Fri Dec 24 , 2021
ಸರಣಿ ಕೊಲೆಗಾರ ಚಾರ್ಲ್ಸ್ ಶೋಭರಾಜ್ ಪ್ರಕರಣದಲ್ಲಿ ಶೋಕಾಸ್ ನೋಟೀಸ್ ಒಂದನ್ನು ಹೊರಡಿಸಿರುವ ನೇಪಾಳ ಸುಪ್ರೀಂ ಕೋರ್ಟ್, 18 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿರುವ ಈತನನ್ನು ಬಿಡುಗಡೆ ಮಾಡಬಾರದೇಕೆ ಎಂದು ಅಲ್ಲಿನ ಸರ್ಕಾರವನ್ನು ಪ್ರಶ್ನಿಸಿದೆ. ಕೊಲೆ ಪ್ರಕರಣವೊಂದರಲ್ಲಿ ಜೀವಿತಾವಧಿಯ ಜೈಲು ಶಿಕ್ಷೆಗೆ ಗುರಿಯಾಗಿರುವ ಚಾರ್ಲ್ಸ್ ಶೋಭರಾಜ್ ಪರ ವಕೀಲರು ಆತನನ್ನು ಬಿಡುಗಡೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದು, ಆತನ ವಯಸ್ಸನ್ನು ಪರಿಗಣಿಸಿ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಶೋಭರಾಜ್‌ನನ್ನು ಏಕೆ ಬಿಡುಗಡೆ ಮಾಡಬಾರದು […]

Advertisement

Wordpress Social Share Plugin powered by Ultimatelysocial