ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿಯಾಗಿ ರೈಡರ್ ಸಿನಿಮಾ ರಿಲೀಸ್ ಆಗಿದೆ. ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಅಭಿನಯದ ಸಿನಿಮಾ ಇದಾಗಿದೆ. ಬೆಂಗಳೂರಿನ ಆನಂದರಾವ್ ವೃತ್ತದಿಂದ ಅನುಪಮ ಚಿತ್ರಮಂದಿರಕ್ಕೆ ಮೆರವಣಿಗೆ ಮೂಲಕ ನಿಖಿಲ್ ಹೋಗಲಿದ್ದಾರೆ.
ಅಲ್ಲದೇ ಆನಂದ್ ರಾವ್ ವೃತ್ತದಲ್ಲಿರುವ ಭವಹರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಚಿತ್ರಮಂದಿರಕ್ಕೆ ಬರಲಿದ್ದು, ಅನುಪಮ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ನಿಖಿಲ್ ಚಿತ್ರ ನೋಡಲಿದ್ದಾರೆ. ನಂತರ ಮಧ್ಯಾಹ್ನದ ನಂತರ ಬೆಂಗಳೂರಿನ ಚಿತ್ರಮಂದಿರಗಳಿಗೆ ಭೇಟಿ ನೀಡಲಿದ್ದಾರೆ
ನಿಖಿಲ್ ತಂದೆ ಕುಮಾರಸ್ವಾಮಿ ರಾಜಕಾರಣಿ ಜೊತೆಗೆ ಚಿತ್ರ ವಿತರಕರೂ ಹೌದು, ಹೀಗಿದ್ದರೂ ನಿಖಿಲ್ ಪತ್ನಿ ರೇವತಿ ಮೊದಲ ವಿಮರ್ಶಕಿಯಂತೆ, ನನ್ನ ಜೀವನದ ಪ್ರತಿ ಹಂತದಲ್ಲೂ ಈ ಸಿನಿಮಾ ಪಯಣದಲ್ಲೂ ರೇವತಿ ಇದ್ದಾರೆ. ನಾನು ರೇವತಿಗೆ ಎಡಿಟ್ ಮಾಡದ ವರ್ಸನ್ ತೋರಿಸಿದೆ, ಅದು ನಾಲ್ಕು ಗಂಟೆಗಳ ಕಾಲ ಇತ್ತು ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಎಂದು ನಿಖಿಲ್ ತಿಳಿಸಿದ್ದಾರೆ.
ಮಂಜು ಅತಾವರ ಮುಂದಿನ ನಿರ್ದೇಶನದ ಚಿತ್ರದಲ್ಲಿ ನಿಖಿಲ್ ನಟಿಸುತ್ತಿದ್ದಾರೆ, ಜನವರಿ ಅಂತ್ಯದಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದೆ, ನಾನು ಕಲಾವಿದನಾಗಿ ಬೆಳೆಯಲು ಬಯಸುತ್ತೇನೆ, ಹಾಗಿಲ್ಲದಿದ್ದರೇ ಮುಂದಿನ ಸಿನಿಮಾಗೆ ಒಪ್ಪಿಕೊಳ್ಳುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada