ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕು: ಬಿಸಿ ಪಾಟೀಲ್

ಹಾವೇರಿ: ರಾಜ್ಯದಲ್ಲಿ ಕಳಪೆ ಗುಣಮುಟ್ಟದ ಮತ್ತು ನಕಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತುದೆ. ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕಾಗಿದೆ .ಆದರೆ ಈ ಜಾಲದ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಾವೇರಿ, ಧಾರವಾಡ, ಬಳ್ಳಾರಿ 1685 ಕ್ಚಿಂಟಲ್ ಕಳಪೆ ಬೀಜ ವಶಕ್ಕೆ ಪಡೆಯಲಾಗಿದೆ‌. ಮುಸುಕಿನ ಜೋಳ, ಸೂರ್ಯಕಾಂತಿ ಸೇದಂತೆ ಅನೇಕ ಬೀಜ ವಶಪಡಿಸಿಕೊಂಡಿದ್ದಾರೆ. ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕಾಗಿದೆ. ಇಲ್ಲವದಾರೆ ಆ ಜಾಲ ಹಾಗೆ ಮುಂದುವರೆಯುತ್ತದೆ‌. ಪೊಲೀಸ್ ಇಲಾಖೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲಾ. ಇದು ನನಗೆ ಬಹಳ ನೋವಾಗಿದೆ‌. ನಕಲಿ ಬೀಜದ ಮೂಲ ಆಂಧ್ರಪ್ರದೇಶ, ವಿಜಯವಾಡ ಸೇರಿದಂತೆ ಅನೇಕ ಕಡೆ ಇದೆ‌. ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದೆ ಇರೋದು ವಿಷಾಧನಿಯ. ಈ ಬಗ್ಗೆ ಗೃಹ ಮಂತ್ರಿ, ಡಿಜಿಪಿಗೆ ಪತ್ರ ಬರೆದಿದ್ದೇನೆ. ಈ ಪ್ರಕರಣದಲ್ಲೂ ಕ್ರಮ ಕೈಗೊಳ್ಳಲು ಹಿಂಜರಿದರೆ ರೈತರಿಗೆ ಅಪಚಾರ ಮಾಡಿದಂತಾಗುತ್ತದೆ. ರೈತರನ್ನು ಜೀವಂತ ಸಮಾಧಿ ಮಾಡುವ ಕಲಸ ಇದು ಎಂದು ಪೊಲೀಸ್ ಇಲಾಖೆ, ಗೃಹ ಇಲಾಖೆ ವಿರುದ್ಧ ಸಚಿವ ಬಿ ಸಿ ಪಾಟೀಲ್ ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಯಾವುದೇ ಬೀಜ, ಗೊಬ್ಬರದ ಕೊರತೆಯಿಲ್ಲಾ. ಕೀಟ ನಾಶಕಗಳು ಕಳೆಪೆಯಾಗಿರೋದು ಗಮನಕ್ಕೆ ಬಂದಿದೆ. ಅಂತವರ ಮೇಲೆ ಕ್ರಮ ಕೈಗೊಳ್ಳಲು, ಲೈಸೆನ್ಸ್ ರದ್ದು ಮಾಡಲು ಆದೇಶ ಮಾಡಿದ್ದೇನೆ. ಈ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಮೆಕ್ಕೆಜೋಳ ಖರೀದಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. 1760 ರೂಪಾಯಿಗೆ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಾಡಲಾಗುವುದು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

576ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

Fri May 1 , 2020
ರಾಜ್ಯದಲ್ಲಿ ಮತ್ತೆ 11 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 576ಕ್ಕೇರಿಕೆಯಾಗಿದೆ. ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ ಬುಲೆಟಿನ್ ನಿಂದ ತಿಳಿದಿದೆ. ಹೊಸದಾಗಿ ಸೋಂಕಿತರ ಪೈಕಿ ಮಂಡ್ಯ ಜಿಲ್ಲೆಯಲ್ಲಿ ಎಂಟು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ 409 ಸಂಖ್ಯೆ 67 ವರ್ಷದ ಮಹಿಳೆ ನಿನ್ನೆ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಾಗೂ ಸಿಪಿಒಡಿ […]

Advertisement

Wordpress Social Share Plugin powered by Ultimatelysocial