ಲಾಕ್ ಡೌನ್ ಸಮಯದಲ್ಲಿ ನೆಮ್ಮದಿಯಿಂದ ಇದ್ದ ಗ್ರಾಮಸ್ಥರಿಗೆ ಸಂಕಷ್ಟ ಬಂದೊದಗಿದೆ. ಕುಡಿತದಿಂದ ಹೊಡೆದಾಟ, ಕೌಟುಂಬಿಕ ದೌರ್ಜನ್ಯಗಳು ಹೆಚ್ಚಾಗುತ್ತಿರುವುದರಿಂದ ಮಹಿಳೆಯರು ಮದ್ಯದಂಗಡಿ ಬಂದ್ ಮಾಡುವಂತೆ ಗಲಾಟೆ ಮಾಡಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ನಡೆದಿದೆ. ಮೊನ್ನೆಯಿಂದ ವೈನ್ ಶಾಪ್ ಆರಂಭವಾದ ಹಿನ್ನೆಲೆಯಲ್ಲಿ, ಮದ್ಯಪಾನ ಮಾಡಿ ಗಲಾಟೆ ಮಾಡುವವರ ಸಂಖ್ಯೆ ಹೆಚ್ಚಾಗಿದ್ದಕ್ಕೆ ಗ್ರಾಮದ ಮಹಿಳೆಯರು ಒಂದಾಗಿ ಬಂದು ವೈನ್ ಶಾಪ್ ಮೇಲೆ ಕಲ್ಲು ತೂರಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಆ ನಂತರ ಮದ್ಯದಂಗಡಿಯನ್ನ ಬಂದ್ ಮಾಡಿದ್ದರು. ಅಲ್ಲಿ ಸೇರಿದ್ದ ಮಹಿಳೆಯರು ವೈನ್ ಶಾಪ್ ಓಪನ್ ಮಾಡದಂತೆ ಮಾಲೀಕರಿಗೆ ಎಚ್ಚರಿಕೆ ನೀಡಿದರು.
ವರದಿ:ಸ್ಪೀಡ್ ನ್ಯೂಸ್ ಕನ್ನಡ