ರಾಜ್ಯದ ೪.೦೧ ಕೋಟಿ ಪಡಿತರ ಚೀಟಿದಾರರಿಗೆ ಮೂರು ತಿಂಗಳ ಮಟ್ಟಿಗೆ ಪಡಿತರ ವಿತರಣೆಗಾಗಿ ಕೇಂದ್ರ ಸರ್ಕಾರ ೮.೫೧ ಮೆಟ್ರಿಕ್ ಲಕ್ಷ ಟನ್ ಉಚಿತ ಆಹಾರ ಧಾನ್ಯಗಳನ್ನು ಪೂರೈಸಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳಿಗೆ ೨.೧ಲಕ್ಷ ಟನ್ ಆಹಾರ ಧಾನ್ಯಗಳನ್ನು ನಿಗದಿಪಡಿಸಲಾಗಿದೆ. ಲಾಕ್ಡೌನ್ ಆದಾಗಿನಿಂದ ರಾಜ್ಯಕ್ಕೆ ೩೦೨ ರೈಲು ಲೋಡ್ ಆಹಾರ ಧಾನ್ಯಗಳನ್ನು ಕಳುಹಿಸಲಾಗಿದೆ ಹಾಗೂ ಅದಕ್ಕಾಗಿ ೨,೩೫೧ಕೋಟಿ ವೆಚ್ಚ ಭರಿಸುತ್ತಿದೆ ಎಂದು ಭಾರತ ಆಹಾರ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ. ಪ್ರಸಾದ್ ತಿಳಿಸಿದ್ದಾರೆ.
೮.೫೧ಲಕ್ಷ ಟನ್ ಆಹಾರ ಧಾನ್ಯ ಪೊರೈಕೆ
Please follow and like us: