ಬೆಂಗಳೂರು: ಕೇಂದ್ರ ಬಜೆಟ್ನಲ್ಲಿ ಶಿಕ್ಷಣಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡಿದ್ದು, ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದೆ.ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಕೇಂದ್ರ ಸಕಾರವನ್ನು ಶ್ಲಾಘಿಸಿದ್ದಾರೆ.ಕೇಂದ್ರ ಬಜೆಟ್ ಕುರುತು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ ನಾಗೇಶ್, ಒಂದು ತರಗತಿ, ಒಂದು ಟಿವಿ ಚಾನಲ್ ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆಯಲ್ಲಿ ಕಲಿಸಲು ಚಾನಲ್ಗಳ ಸಂಖ್ಯೆಯನ್ನು ೨೦೦ಕ್ಕೆ ಹೆಚ್ಚಿಸುವ ಪ್ರಧಾನಿ ನರೇದ್ರ ಮೋದಿ ಸರ್ಕಾರದ ಘೋಷಣೆ ಶ್ಲಾಘನೀಯ. ಇದು ಶಿಕ್ಷಣದ ಪ್ರಸರಣಕ್ಕೆ ಇನ್ನಷ್ಟು ನೆರವಾಗಲಿದೆ ಎಂದು ಪೋಸ್ಟ್ ಮಾಡಿದ್ದಾರೆ.ಕೇಂದ್ರ ಸರ್ಕಾರ ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಇದೊಂದು ದೊಡ್ಡ ನಿರ್ಧಾರವಾಗಿದ್ದು, ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಲು ಈ ಯೋಜನೆ ತರಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada