ಮಂಗಳೂರು, ಫೆ.2: ತಂಡವೊಂದು ಯುವಕನ ಕೊಲೆಗೆ ಯತ್ನಿಸಿದ ಘಟನೆ ಮಂಗಳವಾರ ತಡರಾತ್ರಿ ಕಾಟಿಪಳ್ಳದಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.ಕಾಟಿಪಳ್ಳದ ಮುಹಮ್ಮದ್ ಅನಸ್ (29) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ.ಬಾಡಿಗೆ ಮನೆ ತೆರವು ವಿಚಾರಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಮುಹಮ್ಮದ್ ಅನಸ್ ತನ್ನ ಸ್ನೇಹಿತರಾದ ಅಬೂಬಕರ್ ಮತ್ತು ಹ್ಯಾರಿಸ್ ಅವರೊಂದಿಗೆ 6ನೇ ಬ್ಲಾಕ್ನ ಮನೆಯ ಮುಂದೆ ನಿಂತು ಮಾತನಾಡುತ್ತಿದ್ದಾಗ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಆಗಮಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಕಾಟಿಪಳ್ಳ-ಕೃಷ್ಣಾಪುರ ನಿವಾಸಿಗಳಾದ ರವೂಫ್, ಮುಸ್ತಫಾ ಮತ್ತಿತರರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada