ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಹಿಂದಿರುಗಿದ್ದ ವ್ಯಕ್ತಿಯೊಬ್ಬ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕಟ್ಟಡದ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಹೃದಯಾಘಾತ ಸಂಭಸಿದ್ದು , ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ಕೋವಿಡ್-19 ಸೋಂಕು ಶಂಕೆ ಮೇರೆಗೆ ಈ ಹಿಂದೆ ಕಳುಹಿಸಿದ್ದ ವರದಿ ನೆಗೆಟಿವ್ ಎಂದು ಬಂದಿತ್ತು. ಆದರೂ ಮೃತಪಟ್ಟ ನಂತರವೂ ಮತ್ತೊಮ್ಮೆ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ತಿಳಿಸಿದ್ದಾರೆ