ಉತ್ತರ ಪ್ರದೇಶದ ಹಲವೆಡೆ ಭಾರಿ ಗುಡುಗು ಮಳೆಯಾಗಿದ್ದ, ಪರಿಣಾಮ ಸಿಡಿಲು ಬಡಿದು ವಿಶ್ವ ವಿಖ್ಯಾತವಾದ ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ ಗೆ ಹಾನಿಯಾದ ಘಟನೆ ನಡೆದಿದೆ.. ಐತಿಹಾಸಿಕ ತಾಜ್ ಮಹಲ್ನ ಅಮೃತ ಶಿಲೆಯ ಅಡ್ಡಕಂಬಿಗಳಿಗೆ ಹಾನಿಯಾಗಿದೆ. ಭಾರಿ ಮಳೆಗೆ ಆಗ್ರಾದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು ಹಲವಾರು ಪ್ರಾಣಿಗಳು ಮೃತಪಟ್ಟಿವೆ. ಗುಡುಗು ಸಹಿತ ಭಾರೀ ಮಳೆಗೆ ತಾಜ್ ಮಹಲ್ ನ ಒಂದು ಬಾಗಿಲು ಹಾನಿಗೀಡಾಗಿದ್ದು ಆವರಣದಲ್ಲಿ ಸುತ್ತಲು ಕೆಲ ಮರಗಳು ಬುಡಸಮೇತ ಉರುಳಿ ಬಿದ್ದಿದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಸೂಪರಿಂಟೆಂಡೆಂಟ್ ಬಸಂತ್ ಕುಮಾರ್ ಸ್ವರ್ಣ್ ಕರ್ ತಿಳಿಸಿದ್ದಾರೆ. ಆಗ್ರಾ ಜಿಲ್ಲಾಡಳಿತವು ಮಳೆಯಿಂದ ಮೃತರ ಕುಟುಂಬಸ್ಥರಿಗೆ ₹4 ಲಕ್ಷ ಪರಿಹಾರವನ್ನು ನೀಡಿವುದಾಗಿ ಹೇಳಿದೆ.
.