ಉಡುಪಿ: ರಾಜ್ಯದಲ್ಲಿ ಹಿಜಾಬ್​ ಗಲಾಟೆ ಗುರುವಾರವೂ ಮುಂದುವರಿದಿದೆ.

ಉಡುಪಿ: ರಾಜ್ಯದಲ್ಲಿ ಹಿಜಾಬ್​ ಗಲಾಟೆ ಗುರುವಾರವೂ ಮುಂದುವರಿದಿದೆ. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಇಂದು ದ್ವಿತೀಯ ಪಿಯುಸಿ ಪ್ರಾಕ್ಟಿಕಲ್ ಎಕ್ಸಾಂ ಅನ್ನು ಮುಂದೂಡಲಾಗಿದೆ.ಫೆ.8ರಂದು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು.ಇದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಸರಿ ಶಾಲು, ಪೇಟ ಧರಿಸಿ ಕ್ಯಾಂಪಸ್‌ನಲ್ಲಿ ಹಾಜರಾಗಿದ್ದ ಸ್ಥಳದಲ್ಲಿ ಉದ್ವಿಗನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಕಾಲೇಜಿಗೆ ಆಡಳಿತ ಮಂಡಳಿ ಅನಿರ್ದಿಷ್ಟಾವಧಿ ರಜೆ ಘೋಷಣೆ ಮಾಡಿತ್ತು.ಗುರುವಾರ ಕೆಮಿಸ್ಟ್ರಿ ಪ್ರಾಕ್ಟಿಕಲ್ ಪರೀಕ್ಷೆ ನಡೆಯಬೇಕಿತ್ತು. ಸುಮಾರು ಇಪ್ಪತ್ತಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಈ ತರಗತಿಯಲ್ಲಿದ್ದಾರೆ. ಮತ್ತೆ ಗೊಂದಲದ ವಾತಾವರಣ ನಿರ್ಮಾಣ ಆಗಬಾರದೆಂದು ತಾತ್ಕಾಲಿಕವಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರವೇ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸುವುದಾಗಿ ಎಂಜಿಎಂ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಕಿಯ ಪರ ಮುಂದುವರೆದ ಹೋರಾಟ;

Thu Feb 17 , 2022
ಕಲಘಟಗಿ: ನೊಂದ ಶಿಕ್ಷಕಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿ ಶಂಕರ ಹುದ್ದಾರ ಎಂಬುವರು ನಡೆಸುತ್ತಿರುವ ಆಮರಣ ಉಪವಾಸ ಸತ್ಯಾಗ್ರಹ ಬುಧವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ. ತಾಲ್ಲೂಕಿನ ಕುರುವಿನಕೊಪ್ಪ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕಿ ಪುಷ್ಪಲತಾ ಕಣವಿ ಅವರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೂ ವರ್ಗಾವಣೆ ಮಾಡಲಾಗಿದೆ. ಇದನ್ನು ವಿರೋಧಿಸಿ ಸತ್ಯಾಗ್ರಹ ಮಾಡುತ್ತಿದ್ದೇನೆ. ನ್ಯಾಯಕ್ಕಾಗಿ ಆಗ್ರಹಿಸಿದರೂ ಯಾವುದೇ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಶಂಕರ ಬೇಸರ ವ್ಯಕ್ತಪಡಿಸಿದರು. ಬಿಇಒ ಉಮಾದೇವಿ ಬಸಾಪುರ ಸ್ಥಳಕ್ಕೆ […]

Advertisement

Wordpress Social Share Plugin powered by Ultimatelysocial