ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಲಾಕ್ ಡೌನ್ ಸಡಿಲಿಕೆ ಮಾಡಿರುವ ಬೆನ್ನಲ್ಲೇ ಹೋಟೆಲ್ಗಳ ಆರಂಭಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹಾಗೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಕೆಲ ಕಾಲ ಅಧಿಕಾರದ ಜಂಜಾಟದಿಂದ ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಹೀಗಾಗಿ ಇಂದು ಬೆಳಿಗ್ಗೆ ಎಂಟಿಆರ್ ಗೆ ತೆರಳಿ ಉಪಹಾರ ಸೇವಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಜೊತೆಗೆ ಸಚಿವ ಆರ್. ಅಶೋಕ್, ಸಂಸದ ತೇಜಸ್ವಿ ಸೂರ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರ್ ಗೌಡ ಪಾಟೀಲ್ ಭಾಗಿಯಾದ್ದಾರೆ.