ದೇಶದಾದ್ಯಂತ 24 ಗಂಟೆಯಲ್ಲಿ 22,270 ಮಂದಿಗೆ ಕೊರೋನಾ, 325 ಸಾವು
ಸಕ್ರಿಯ ಪ್ರಕರಣಗಳ ಸಂಖ್ಯೆ 2,53,739 ಕ್ಕೆ ಇಳಿಕೆಯಾಗಿದ್ದು, ಇದೇ ಅವಯಲ್ಲಿ 325 ಸಾವುಗಳೊಂದಿಗೆ ಸಾವಿನ ಸಂಖ್ಯೆ 5,11,230 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಸತತ 13 ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಸೋಂಕಿತರು ವರದಿಯಾಗುತ್ತಿದ್ದು, ರಾಷ್ಟ್ರೀಯ ಕೋವಿಡ್ ಸೋಂಕಿತರ ಚೇತರಿಕೆ ದರವು 98.21 ಶೇಕಡಾಕ್ಕೆ ತಲಿಪಿದ್ದು, ದೈನಂದಿನ ಧನಾತ್ಮಕತೆಯ ದರವು ಶೇಕಡಾ 1.80 ರಷ್ಟಿದ್ದರೆ, ವಾರದ ಧನಾತ್ಮಕತೆಯ ದರವು ಶೇಕಡಾ 2.50 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ರಾಷ್ಟ್ರವ್ಯಾಪಿ ನಡೆಯುತ್ತಿರುವ ಕೋವಿಡ್-19 ಲಸಿಕಾ ಅಭಿಯಾನದ ಅಡಿಯಲ್ಲಿ ಇದುವರೆಗೆ 175.03 ಕೋಟಿಗೂ ಅಕ ಡೋಸ್ಗಳನ್ನು ನೀಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Sat Feb 19 , 2022
ಭಾರ್ಗವಿ ನಾರಾಯಣ್ ಪ್ರಖ್ಯಾತ ರಂಗಭೂಮಿ ಹಿರಿಯ ಕಲಾವಿದೆ ಮತ್ತು ದೂರದರ್ಶನ ಧಾರವಾಹಿಗಳ ಮೌಲ್ಯಯುತ ಪಾತ್ರಗಳ ನಿರ್ವಹಣೆಯ ಅನುಭವಿ ಪಾತ್ರಧಾರಿ ಎಂದೇ ಪ್ರಸಿದ್ಧರಾಗಿದ್ದಾರೆ. ಭಾರ್ಗವಿ ನಾರಾಯಣ್ 1938ರ ಫೆಬ್ರುವರಿ 4ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಡಾ. ಎಂ. ರಾಮಸ್ವಾಮಿ. ತಾಯಿ ನಾಮಗಿರಿಯಮ್ಮ. ಮಹಾರಾಣಿ ಕಾಲೇಜಿನಿಂದ ಬಿ.ಎಸ್ಸಿ. ಪದವಿ ಪಡೆದ ನಂತರದಲ್ಲಿ ಇಂಗ್ಲಿಷ್ನಲ್ಲಿ ಎಂ.ಎ. ಪದವಿ ಪಡೆದ ಭಾರ್ಗವಿ ಅವರು ಇ.ಎಸ್.ಐ. ಕಾರ್ಪೊರೇಷನ್ನಿನಲ್ಲಿ ವ್ಯವಸ್ಥಾಪಕರ ಹುದ್ದೆ ನಿರ್ವಹಿಸಿ 1990ರಲ್ಲಿ ಸ್ವಯಂ ನಿವೃತ್ತಿ ಪಡೆದರು. […]