ರಾಜ್ಯಾದ್ಯಂತ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದಂತೆಯೇ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಕೈಬಿಟ್ಟಿದ್ದಾರೆ. ಸಿಎಂ ಬಿಎಸ್ವೈ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ಆದರೀಗ, ಕೊರೊನಾ ಭೀತಿಯಿಂದಾಗಿ ಬೆಂಗಳೂರಿನಿAದಲೇ ಆನ್ಲೈನ್ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲು ನಿರ್ಧರಿಸಿದ್ದಾರೆ. ಇಂದು ಶಿವಮೊಗ್ಗಕ್ಕೆ ವಿವಿಧ ಕಾಮರಿಗಳಿಗೆ ಚಾಲನೆ ನೀಡುವ ಸಲುವಾಗಿ ಹೋಗಬೇಕಿತ್ತು. ಆದರೆ, ಕೊರೊನಾ ಕಾರಣದಿಂದ ಆನ್ಲೈನ್ ಮೂಲಕ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್ಲೈನ್ ಮೂಲಕ ಭೂಮಿ ಪೂಜೆ ನೆರವೇರಿಸಲಿದ್ಧಾರೆ. ಕೊರೋನಾ ಸಮಸ್ಯೆ ಇಲ್ಲದಿದ್ದರೇ ಸ್ಥಳಕ್ಕೆ ಹೋಗಿ ಕಾಮಗಾರಿಗೆ ಚಾಲನೆ ನೀಡಬಹುದಿತ್ತು. ಇದೀಗ ರಾಜ್ಯ ಪ್ರವಾಸ ರದ್ದು ಮಾಡಿರುವ ಅವರು ಬೇರೆ ಜಿಲ್ಲೆಗಳ ವಿವಿಧ ಕಾಮಗಾರಿಗಳಿಗೆ ಆನ್ಲೈನ್ ಮೂಲಕ ಚಾಲನೆ ನೀಡಲಿದ್ಧಾರೆ.
ಸಿಎಂ ರಾಜ್ಯ ಪ್ರವಾಸ ರದ್ದು
Please follow and like us: