ಕೋಟಾದ ನಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಂಬಲ್ನ ಚಿಕ್ಕ ಮೋರಿಯಲ್ಲಿ ತಡರಾತ್ರಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕಾರೊಂದು ನದಿಗೆ ಬಿದ್ದ ಪರಿಣಾಮ ವರ ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಮದುಮಗ ಸೇರಿದಂತೆ 9 ಮಂದಿ ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದರು. ನಿನ್ನೆ ರಾತ್ರಿಯವರೆಗೆ, 8 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ ಮತ್ತು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಟ್ವೀಟ್ ಮಾಡಿ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಚಂಬಲ್ ನದಿಗೆ ಕಾರು ಬಿದ್ದು ಹಲವಾರು ಮಂದಿ ಸಾವನ್ನಪ್ಪಿರುವುದು ಹೃದಯ ವಿದ್ರಾವಕವಾಗಿದೆ ಎಂದು ಅವರು ಹೇಳಿದರು. ದೇವರು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಈ ಅಪಾರ ನೋವಿನ ಸಮಯದಲ್ಲಿ ನನ್ನ ಸಂತಾಪಗಳು ಅವರೊಂದಿಗಿವೆ’’ ಎಂದು ಹೇಳಿದರು. ಇಷ್ಟು ದೊಡ್ಡ ಅವಘಡ ಸಂಭವಿಸಿದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತ ಸ್ಥಳಕ್ಕೆ ಧಾವಿಸಿ ರಕ್ಷಣಾ ತಂಡದ ನೆರವಿನಿಂದ ಕಾರನ್ನು ಹೊರತೆಗೆಯಲಾಯಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada