ರಾಜ್ಯದಲ್ಲಿ ಕೊರೊನಾ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್ಡೌನ್ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ರಾಜ್ಯವನ್ನು ಮತ್ತೊಮ್ಮೆ ಲಾಕ್ಡೌನ್ ಮಾಡಬೇಕೆಂಬ ಸಲಹೆಗಳು ಕೇಳಿ ಬಂದಿವೆ. ಸಿಎಂ ಯಡಿಯೂರಪ್ಪ ಅವರ ಜತೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಈಗಾಗಲೇ ಈ ಕುರಿತು ಚರ್ಚೆಗಳು ಆರಂಭಗೊಂಡಿದ್ದು, ಬೆಂಗಳೂರಿನ ಕೆಲವು ಕ್ಷೇತ್ರಗಳಲ್ಲಿ ಲಾಕ್ಡವನ್ ನಿಯಮಾವಳಿಗಳನ್ನು ಬಿಗಿಗೊಳಿಸಲಾಗಿದೆ. ರಾಜ್ಯಾದ್ಯಂತ ಇದೇ ರೀತಿ ಲಾಕ್ಡೌನ್ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಕರ್ನಾಕದಲ್ಲಿ ಮತ್ತೆ ಲಾಕ್ಡೌನ್..?
Please follow and like us: