ಇನ್ಮುಂದೆ ಬೆಂಗಳೂರಿಗರು ಚಿಂತಿಸುವ ಅಗತ್ಯವಿಲ್ಲ ಪ್ರತೀ ಎರಡು ವಾರ್ಡ್ ಗಳಿಗೆ ಒಂದೊಂದು ಆ್ಯಂಬುಲೆನ್ಸ್ ಗಳನ್ನು ಮೀಸಲಿಡಲಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ದಿನಕಳೆದಂತೆ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಗದೇ ರೋಗಿಗಳು ಪರದಾಡುತ್ತಿರುವ ಸುದ್ದಿಗಳ ನಡುವೆಯೇ ಕಂದಾಯ ಸಚಿವ ಈ ಸಂಬಂಧ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಕೋವಿಡ್ ದೃಢಪಟ್ಟ ರೋಗಿಗಳು ಕಾಯುವ ಸ್ಥಿತಿ ಬರಬಾರದೆಂದು ಹೇಳಿದ್ದಾರೆ. ಹಾಗೂ ತಪಾಸಣಾ ವರದಿ ಬಂದ 6–8 ಗಂಟೆ ಒಳಗೆ ಚಿಕಿತ್ಸಾ ಕೇಂದ್ರಕ್ಕೆ ತಲುಪಿಸಲು ಅಗತ್ಯವಾದ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. ಅಲ್ಲದೇ ಸೋಂಕು ದೃಢಪಟ್ಟರೆ ಅಂಥಹವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸದ್ಯ 100 ಆಂಬುಲೆನ್ಸ್ಗಳು ಲಭ್ಯವಿವೆ. ಎರಡು ವಾರ್ಡ್ಗಳಿಗೆ ಒಂದು ಆಂಬುಲೆನ್ಸ್ ಸಿಗುವಂತೆ ವ್ಯವಸ್ಥೆ ಮಾಡಿದ್ದೇವೆ. ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಆಂಬುಲೆನ್ಸ್ಗಳನ್ನು ಈ ಉದ್ದೇಶಕ್ಕೆ ಬಳಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.