ಅಜ್ಞಾನದಿಂದ ಜ್ಞಾನದ ಕಡೆಗೆ ನಮ್ಮನ್ನು ಕರೆದು ಕೊಂಡು ಹೋಗುವ ಅಂತಹ ಗುರುಗಳಿಗೆ ಗುರು ಪೂರ್ಣಿಮೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಗುರುಗಳಿಗೆ ಗೌರವ ಸಲ್ಲಿಸಿ ಗುರು ಪೂರ್ಣಿಮೆಯ ಶುಭಾಶಯ ಕೋರಿದ್ದಾರೆ. ಗುರು ಪೂರ್ಣಿಮೆಯಂದು ದೇಶವಾಸಿಗಳಿಗೆ ಅನೇಕ ಶುಭಾಶಯಗಳು.ಜೀವನವನ್ನು ಅರ್ಥಪೂರ್ಣವಾಗಿಸುವ ಗುರುಗಳನ್ನು ಗೌರವಿಸುವ ವಿಶೇಷ ದಿನವಾಗಿದೆ ಈ ಸಂದರ್ಭದಲ್ಲಿ, ಎಲ್ಲಾ ಗುರುಗಳಿಗೆ ನನ್ನ ಶುಭಾಶಯಗಳು. ಎಂದು ಪ್ರಧಾನಿ ಟ್ವೀಟ್ ನ ಮೂಲಕ ಶುಭಾಯಗಳನ್ನು ತಿಳಿಸಿದ್ದಾರೆ.
Please follow and like us:
Sun Jul 5 , 2020
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು, ಭದ್ರತಾ ಪಡೆಗಳು ಪುಲ್ವಾಮಾದ ಗಾಂಗೂ ಪ್ರದೇಶದಲ್ಲಿ ಸಾಗುತ್ತಿರುವಾಗ ಸಿ.ಆರ್.ಪಿ.ಎಫ್ ಯೋಧರನ್ನು ಗುರಿಯಾಗಿಸಿ ಉಗ್ರರು ಐಇಡಿ ಬಳಸಿ ದಾಳಿ ಮಾಡಿದ್ದಾರೆ. ಸ್ಫೋಟ ಸಂಭವಿಸಿದ ನಂತರ ಗುಂಡಿನ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಸೇನೆ ಸುತ್ತುವರೆದಿದ್ದು, […]