ಕೊರೋನಾ ಪರಿಕರ ಖರೀದಿಯಲ್ಲಿ ಲೂಟಿ ಹೊಡೆದಿದ್ದರೆ ಸಿದ್ಧರಾಮಯ್ಯ ದಾಖಲೆ ಬಿಡುಗಡೆ ಮಾಡಲಿ ಎಂದು ಸಚಿವ ಶ್ರೀರಾಮುಲು ಸವಾಲು ಹಾಕಿದ್ದು, ಇದಕ್ಕೆ ಸಿದ್ದರಾಮಯ್ಯ, ಬಳ್ಳಾರಿಯ ನಿಮ್ಮ ಅಣ್ಣ, ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು. ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ ಎಂದು ಹೇಳಿದ್ದಾರೆ. ನಂತರ ಸಿದ್ದರಾಮಯ್ಯ ಆರೋಪಕ್ಕೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಸಿದ್ದರಾಮಯ್ಯನವರೇ ನಾಡು ಕೊರೊನಾ ಸಂಕಷ್ಟದಲ್ಲಿದೆ. ಜನರು ಸಮಸ್ಯೆಯಲ್ಲಿದ್ದಾರೆ. ಕೋರೋನಾ ಗೆಲ್ಲಬೇಕಿದೆ. ಇದು ಕೆಲಸ ಮಾಡುವ ಸಮಯ. ನಮ್ಮನ್ನು ಕೆಲಸ ಮಾಡಲು ಬಿಡಿ, ನಿಮ್ಮಿಂದ ಇಷ್ಟು ಕನಿಷ್ಠ ಮಟ್ಟದ ಸಹಕಾರವನ್ನು ಕೇಳುತ್ತೇನೆ ಅಷ್ಟೆ. ಜನತೆಯ ಪರವಾಗಿ ನಾನು ಸಹಕಾರವನ್ನು ಕೇಳುತ್ತಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದುಗೆ ಶ್ರೀರಾಮುಲು ತಿರುಗೇಟು
Please follow and like us: