ಹೆರಿಗೆಗೆಂದು ದಾಖಲಾಗಿದ್ದ ಗರ್ಭಿಣಿಗೆ ಕೋವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಬಂದ ಕಾರಣ ಹೆರಿಗೆ ಮಾಡಿಸಲು ನಿರಾಕರಿಸಿದ ಖಾಸಗಿ ಆಸ್ಪತ್ರೆ ಬಳಿಕ ಶಾಸಕ ಯು.ಟಿ. ಖಾದರ್ ಅವರ ಪ್ರಯತ್ನದ ಫಲವಾಗಿ ಹೆರಿಗೆ ಮಾಡಿಸಲು ಸಮ್ಮತಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗರ್ಭಿಣಿ ಹೆರಿಗೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರವಿವಾರ ಕೋವಿಡ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿತ್ತು. ಆಗ ಆಸ್ಪತ್ರೆಯವರು ಹೆರಿಗೆ ಮಾಡಿಸಲು ನಿರಾಕರಿಸಿದರು. ಗರ್ಭಿಣಿಯ ಕುಟುಂಬದವರು ವಿಷಯವನ್ನು ಖಾದರ್ ಅವರ ಗಮನಕ್ಕೆ ತಂದರು. ಶಾಸಕರು ಖಾಸಗಿ ಆಸ್ಪತ್ರೆಗಳಲ್ಲಿ ವಿಚಾರಿಸಿದಾಗ ನಿರಾಕರಿಸಿದ್ದರಿಂದ ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಅಷ್ಟರಲ್ಲಿ ಪ್ರಾರಂಭದಲ್ಲಿ ನಿರಾಕರಿಸಿದ ಆಸ್ಪತ್ರೆಯ ಆಡಳಿತ ಮಂಡಳಿಯೇ ಗರ್ಭಿಣಿಯ ಹೆರಿಗೆಗೆ ಸಮ್ಮತಿಸಿದ್ದು, ಹೆರಿಗೆ ನಡೆಯಿತು ಎಂದು ಖಾದರ್ ತಿಳಿಸಿದ್ದಾರೆ.
ಪ್ರಾರಂಭದಲ್ಲಿ ನಿರಾಕರಿಸಿದ ಆಸ್ಪತ್ರೆಯಲ್ಲಿ ಕೊನೆಗೂ ಹೆರಿಗೆ
Please follow and like us: