ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮಟ್ಟ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರ ರವಿವಾರ ಲಾಕ್ಡೌನ್ ಘೋಷಣೆ ಮಾಡಿರುವುದಕ್ಕೆ ಉಡುಪಿ ಜಿಲ್ಲೆಯಾ ದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಜನರು ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸಿ ಸರಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ. ನಗರದ ಪ್ರಮುಖ ಭಾಗಗಳಾದ ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಕೆ.ಎಂ. ಮಾರ್ಗ, ಕರಾವಳಿ ಬೈಪಾಸ್, ಬ್ರಹ್ಮಗಿರಿ ವೃತ್ತಗಳಲ್ಲಿ ಜನರ ಓಡಾಟ ಬಹುತೇಕ ವಿರಳವಾಗಿತ್ತು. ಆಸ್ಪತ್ರೆ, ಮೆಡಿಕಲ್ ಶಾಪ್ ಗಳು, ಆ್ಯಂಬುಲೆನ್ಸ್, ಪೆಟ್ರೋಲ್ ಬಂಕ್ಗಳು, ಸರಕು ಸಾಗಾಣಿಕೆ ವಾಹನ, ಪೊಲೀಸ್, ಅಗ್ನಿಶಾಮಕ ಸೇವೆಗಳು ಲಭ್ಯವಾಗಿದ್ದವು. ಉಳಿದಂತೆ ಎಲ್ಲ ಅಂಗಡಿಗಳನ್ನು ಮುಚ್ಚಲಾಗಿತ್ತು.
ಲಾಕ್ಡೌನ್ ಉಡುಪಿ ಜಿಲ್ಲೆ ಬಹುತೇಕ ಸ್ತಬ್ಧ
Please follow and like us: