ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಮೌಲ್ಯಮಾಪನ ಆಗಿರುವ ಉತ್ತರ ಪತ್ರಿಕೆ ಪ್ರತಿ ಪಡೆದುಕೊಳ್ಳುವುದು ಅಭ್ಯರ್ಥಿಗಳ ಹಕ್ಕು ಎಂದು ಹೇಳಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯನ್ನೂ ಕೆಪಿಎಸ್ಸಿ ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ ಎಂದೂ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ಆದರೂ, ಅಭ್ಯರ್ಥಿಗಳನ್ನು ಕೆಪಿಎಸ್ಸಿ ಅಲೆದಾಡಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ. ನನ್ನನ್ನು ಭೇಟಿ ಮಾಡಿ ಅಳಲು ತೋಡಿಕೊಂಡಿರುವ ಅಭ್ಯರ್ಥಿಗಳು, ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.
ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದು ಒತ್ತಾಯ
Please follow and like us: