ತಹಶೀಲ್ದಾರ್ ಚಂದ್ರಮೌಳೇಶ್ವರ ಕೊಲೆ ಪ್ರಕರಣ, ಕರ್ನಾಟಕ ರಾಜ್ಯ ನೌಕರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್ ಚಂದ್ರಮೌಳೇಶ್ವರ ಮೇಲೆ ಪೊಲೀಸರ ಸಮ್ಮುಖದಲ್ಲೆ ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಅವರು ಚಾಕುವಿನಿಂದ ಗಾಯಗೊಳಿಸಿದ್ದು, ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಈ ದುರ್ಘಟನೆಯನ್ನು ಖಂಡಿಸಿ ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಕರ್ನಾಟಕ ರಾಜ್ಯ ನೌಕರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ, ಅಧಿಕಾರಿಗಳಿಗೆ ಎಲ್ಲ ರೀತಿಯ ರಕ್ಷಣೆ ನೀಡಬೇಕು ಮತ್ತು ಆರೋಪಿಯನ್ನು ಬಂಧಿಸಿ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮಾಡಿದ್ದರು. ಈ ಸಂದರ್ಭದಲ್ಲಿ ನೌಕರರ ಸಂಘದ ಪದಾಧಿಕಾರಗಳು ಉಪಸ್ಥಿತರಿದ್ದರು.
ತಹಶೀಲ್ದಾರ್ ಹತ್ಯೆ ಖಂಡಿಸಿ
Please follow and like us: