ಹುಬ್ಬಳ್ಳಿ: ನಗರ ಹೊರವಲಯದ ಗಬ್ಬೂರ ಬೈಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ವೃತ್ತದ ಬಳಿಯ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಸುಕಿನಲ್ಲಿ ಸಂಭವಿಸಿದೆ.
ದೊಡ್ಡಬಳ್ಳಾಪುರದ ಕಾರು ಚಾಲಕ ರಂಜಿತ ಮತ್ತು ಪ್ರಯಾಣಿಕ ರಾಕೇಶ ಮೃತರು.
ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಇವರೆಲ್ಲರೂ ದೊಡ್ಡಬಳ್ಳಾಪುರದಿಂದ ದಾಂಡೇಲಿಗೆ ಹೊಗುತ್ತಿದ್ದರು. ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ. ಗಾಯಗೊಂಡ ನಿತಿನ್, ಲೋಕೇಶ್, ಅಮಿತ್, ಪ್ರಮೋದ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada
Please follow and like us:
Fri Mar 18 , 2022
ವಿಶ್ವಸಂಸ್ಥೆ, ಮಾರ್ಚ್ 18 ಉಕ್ರೇನ್ನಲ್ಲಿ ಯುಎನ್ಯು ಲಕ್ಷಾಂತರ ಜನರಿಗೆ “ಗಂಭೀರ ಭಯ” ಮೂಡಿಸಿರುವ ಯುದ್ಧವನ್ನು ಕೊನೆಗೊಳಿಸಲು ರಾಜತಾಂತ್ರಿಕತೆಯಲ್ಲಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಭಾರತ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರು “ಸಂವಾದ ಮತ್ತು ರಾಜತಾಂತ್ರಿಕತೆಯ ಮಾರ್ಗವನ್ನು ಹೊರತುಪಡಿಸಿ ಬೇರೆ ದಾರಿಯಿಲ್ಲ” ಎಂದು ಒತ್ತಿ ಹೇಳಿದರು, ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಗುರುವಾರ ಹೇಳಿದರು. “ಮುಂಬರುವ ದಿನಗಳಲ್ಲಿ ಭದ್ರತಾ ಮಂಡಳಿಯಲ್ಲಿ ಮತ್ತು ಪಕ್ಷಗಳೊಂದಿಗೆ (ಸಂಘರ್ಷಕ್ಕೆ) ಈ ಉದ್ದೇಶಗಳ ಮೇಲೆ ತೊಡಗಿಸಿಕೊಳ್ಳಲು […]