ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಇಂದಿರಾನಗರದಲ್ಲಿರುವ ಸಿವಿ ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆ, ಸೌಲಭ್ಯಗಳ ಪರಿಶೀಲನೆ ನಡೆಸಿದರು. ವೈದ್ಯರು, ಸಿಬ್ಬಂದಿ ಬಳಿ ಮಾಹಿತಿ ಪಡೆದು ಸಮಾಲೋಚನೆ ನಡೆಸಿ, ಸಲಹೆ ನೀಡಿದರು. ನಂತರ ಕೋವಿಡ್ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವರು ಮಾಹಿತಿ ಪಡೆದರು. ಲಘು ರೋಗ ಲಕ್ಷಣ ಇರುವವರನ್ನು ದಾಖಲು ಮಾಡಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಹದಿನೈದು ಹೈ ಪ್ಲೋ ಆಕ್ಸಿಜನ್ ಬೆಡ್ ಪೈಕಿ ಎರಡರಲ್ಲಿ ಮಾತ್ರ ರೋಗಿಗಳನ್ನು ದಾಖಲಿಸಿದ್ದಕ್ಕೆ ಅಧಿಕಾರಿಗಳು ವಿರುದ್ಧ PÉಡಾಮಂಡಲವಾದರು. ಕೋವಿಡ್ ಕೇರ್ ಸೆಂಟರ್ ಗೆ ಹೋಗಬೇಕಿದ್ದವರಿಗೂ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಕ್ಕೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ
ಸಿ.ವಿ ರಾಮನ್ ಆಸ್ಪತ್ರೆಯಲ್ಲಿ ಡಾ.ಕೆ.ಸುಧಾಕರ್
Please follow and like us: