ಲಕ್ನೋ, ಮಾರ್ಚ್ 25; ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ ಶುಕ್ರವಾರದಿಂದ ರಾಜ್ಯದಲ್ಲಿ ಆಡಳಿತ ನಡೆಸಲಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 255 ಸ್ಥಾನಗಳಲ್ಲಿ ಜಯಗಳಿಸಿದೆ.
ಗುರುವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಸಂಜೆ 4 ಗಂಟೆಗೆ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಯೋಗಿ ಆದಿತ್ಯನಾಥ್ ಆಯ್ಕೆಯಾಗಿದ್ದಾರೆ. 2017ರ ಚುನಾವಣೆಯಲ್ಲಿ ಪಕ್ಷ ಜಯಗಳಿಸಿದಾಗ ಮಾರ್ಚ್ 17ರಂದು ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Fri Mar 25 , 2022
ಹಣಕಾಸು ಸಚಿವರೂ ಆಗಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾವು ಆರಂಭಿಸಿರುವ ಕೆಲವು ಪ್ರಮುಖ ಆರ್ಥಿಕ ಸುಧಾರಣೆಗಳ ಮೂಲಕ ನೋಡುವುದಾಗಿ ವಿಧಾನಸಭೆಗೆ ಭರವಸೆ ನೀಡಿದರು. 26,953 ಕೋಟಿ ರೂಪಾಯಿಗಳ ಅಭೂತಪೂರ್ವ ಮೊತ್ತವನ್ನು ಒಟ್ಟುಗೂಡಿಸಿ ಪೂರಕ ಅಂದಾಜುಗಳನ್ನು ವಿಧಾನಸಭೆ ಅಂಗೀಕರಿಸುವ ಮೊದಲು ಅವರು ಮಾತನಾಡಿದರು. ಪೂರಕ ಅಂದಾಜುಗಳು ಬಜೆಟ್ ನಿಬಂಧನೆಗಳ ಮೇಲೆ ಮತ್ತು ಅದಕ್ಕಿಂತ ಹೆಚ್ಚಾಗಿ ಸರ್ಕಾರವು ಮಾಡುವ ಹೆಚ್ಚುವರಿ ವೆಚ್ಚಗಳಾಗಿವೆ. “ಅನೇಕ ಲೋಪದೋಷಗಳು ನುಸುಳಿವೆ. ಖಾತೆಯ ಮುಖ್ಯಸ್ಥರ ಸಂಖ್ಯೆ […]