ಹೆಚ್ಚುತ್ತಿರುವ ಕೊರೊನಾ ವೈರಸ್ ತಡೆಗಟ್ಟಲು ಕೊನೆಗೂ ಜಿಲ್ಲಾಡಳಿತ ಒಂದು ವಾರದ ಲಾಕ್ಡೌನ್ ಜಾರಿ ಮಾಡಿದ್ದು, ಜಿಲ್ಲಾದ್ಯಂತ ಪರಿಷ್ಕೃತ ನಿಷೇದಾಜ್ಞೆ ಜಾರಿಗೊಳಿಸಿ ಲಾಕ್ ಡೌನ್ ಮಾಡಲಾಗಿದೆ. ಪೊಲೀಸರು, ಆರೋಗ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಫೀಲ್ಡ್ಗಿಳಿದು ಮಾರುಕಟ್ಟೆ, ಸರ್ವಜನಿಕ ಸಂಚಾರಕ್ಕೆ ಬ್ರೇಕ್ ಹಾಕಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ ಲಾಕ್ಡೌನ್ಗೆ ಬೀದರ ನಗರ ಸೇರಿದಂತೆ ತಾಲೂಕುಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಲಾಕ್ಡೌನ್ ಹಿನ್ನೆಲೆ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ಹೋಟೆಲ್, ಅಂಗಡಿಗಳು ಬಂದ್ ಆಗಿದ್ದು, ಜನ ಸಂಚಾರವಿಲ್ಲದೇ ರಸ್ತೆಗಳು ಖಾಲಿ ಖಾಲಿಯಾಗಿ ಗೋಚರಿಸುತ್ತಿದ್ದವು. ಬೆಳೆಗ್ಗೆ ೬ ರಿಂದ ೧೧ಗಂಟೆಯವರೆಗೆ ತರಕಾರಿ, ಹಾಲು, ಹಣ್ಣು ಅಂಗಡಿಗಳು ತೆರೆದಿದ್ದವು. ನಂತರ ಮೆಡಿಕಲ್ ಶಾಪ್ ಹೊರತುಪಡಿಸಿ, ಉಳಿದೆಲ್ಲಾ ಅಂಗಡಿಗಳು ಬಂದ್ ಆಗಿದ್ದವು.ಅನಗತ್ಯವಾಗಿ ರಸ್ತೆಗಿಳಿದವರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲಾಯಿತು. ಮತ್ತೆ ಕೆಲವರ ಬೈಕ್ಗಳನ್ನು ಜಪ್ತಿ ಮಾಡಿ ಠಾಣೆಗೆ ಕೊಂಡೊಯ್ಯುತ್ತಿರುವುದು ಕಂಡುಬಂತು.
ಬೈಕ್ಗಳನ್ನು ಜಪ್ತಿ ಮಾಡಿದ ಪೊಲೀಸರು
Please follow and like us: