ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪಂಕಜ್ ಕುಮಾರ್ ಈ ಸಂಬಂಧ ತೀರ್ಪು ನೀಡಿದ್ದಾರೆ.
ಹಲವು ಮಧ್ಯವರ್ತಿಗಳಿಂದ ಉತ್ತರ ಬಂದಿರುವುದು ಮತ್ತು ವಿಧಿವಿಜ್ಞಾನ ಪ್ರಯೋಗಾಲಯ ವರದಿ ನಿರೀಕ್ಷಿಸಲಾಗುತ್ತಿದೆ ಎನ್ನುವುದನ್ನು ಠಾಕೂರ್ಗೆ ಜಾಮೀನು ನಿರಾಕರಿಸಲು ಆಧಾರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಆರೋಪಿ ಎಫ್ಎಸ್ಎಲ್ ವರದಿಯ ಮೇಲೆ ಪರಿಣಾಮ ಬೀರಲಾಗದು ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಸಲ್ಲಿಸಿದ ಮತ್ತೊಂದು ಆರೋಪಪಟ್ಟಿಯಲ್ಲಿ ಠಾಕೂರ್ ಹೆಸರು ಇರುವುದರಿಂದ, ಠಾಕೂರ್ ಜೈಲಿನಿಂದ ತಕ್ಷಣ ಹೊರಹೋಗುವಂತಿಲ್ಲ.
ಮಧ್ಯಪ್ರೇಶದ ಇಂಧೋರ್ ನಲ್ಲಿರುವ ಆರೋಪಿಯ ಮನೆಯಿಂದ ಆತನನ್ನು ಈ ವರ್ಷದ ಆರಂಭದಲ್ಲಿ ಬಂಧಿಸಲಾಗಿತ್ತು. ಆಯಪ್ ಸೃಷ್ಟಿಸಿ ಹಲವು ಮಂದಿ ಮುಸ್ಲಿಂ ಮಹಿಳೆಯರನ್ನು ಅನ್ಲೈನ್ನಲ್ಲಿ “ಹರಾಜು” ಮಾಡಲು ಮುಂದಾಗಿದ್ದ ಎಂಬ ಆರೋಪದಲ್ಲಿ ಈತನನ್ನು ಬಂಧಿಸಲಾಗಿತ್ತು. ದೆಹಲಿ ಹಾಗೂ ನೋಯ್ಡಾದಲ್ಲಿ ಈತನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada