ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ . ಕೊರೊನಾ ವಿಚಾರವಾಗಿ ಕರೆದ ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರದ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಾಜಿ ಸಚಿವ ಹೆಚ್.ಕೆ.ಪಾಟೀಲ್,ರಮೇಶ್ ಕುಮಾರ್ ,ಯು.ಟಿ.ಖಾದರ್,ಹೆಚ್.ಎಂ.ರೇವಣ್ಣ,ಕೆ.ಜೆ.ಜಾರ್ಜ್ ,ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ , ಸಲೀಂ ಅಹ್ಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಹಲವರು ಹಿರಿಯ ಮುಖಂಡರು ಭಾಗಿಯಾಗಿದ್ದರು.ಈ ಸಭೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚಿಸಲಾಯಿತು.ಹಾಗು ಮೆಡಿಕಲ್ ಕಿಟ್ ಖರೀದಿಯಲ್ಲಿ ನಡೆಯುತ್ತಿರುವ ಗೋಲ್ ಮಾಲ್ ಆರೋಪಗಳ ಬಗ್ಗೆ, ಕೋವಿಡ್ ತಡೆಯುವಲ್ಲಿ ಸರ್ಕಾರದ ವೈಫಲ್ಯತೆ ಬಗ್ಗೆ , ಜನಸಾಮಾನ್ಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸದಿರುವುದು ಬಗ್ಗೆಯು ಸಹ ಸಭೆಯಲ್ಲಿ ಗಂಭೀರ ಚರ್ಚೆ ಆರಂಭವಾಯಿತು.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ
Please follow and like us: