ಹಳ್ಳಿಗಳಲ್ಲಿ ಕೊರೊನಾದಿಂದ ಮರಣ ಮೃದಂಗವಾಗುತ್ತಿದೆ.ಮುಂದಿನ ಮೂರು ತಿಂಗಳು ಹಳ್ಳಿಗಳಿಗೆ ಕಂಟಕ ಎಂದು ಜಗತ್ ಪ್ರಸಿದ್ಧ ಸು ಕ್ಷೇತ್ರ ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಹಳ್ಳಿಗಳ ಜನರು ಎಚ್ಚರದಿಂದ ಇರಬೇಕು ಎಂದು ಸ್ವಾಮೀಜಿ ಮನವಿ ಮಾಡಿಕೊಂಡಿದ್ದು, ಸ್ಚಚ್ಛತೆ, ಸುರಕ್ಷತೆ, ಅಂತರ ಕಾಪಾಡಿ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ. ಕೊರೊನಾ ಗಾಳಿಯಲ್ಲಿ ಸಂಚಾರ ಮಾಡೋದು ಕಡಿಮೆ, ಸರ್ಕಾರದ ತೀರ್ಮಾನಗಳು ಕೊರೊನಾ ಕಾಯಿಲೆ ಹೆಚ್ಚು ಮಾಡಿದ್ದು ಮತ್ತೊಂದು ತಿಂಗಳು ಲಾಕ್ ಡೌನ್ ಮುಂದುವರೆಸಿದ್ದರೆ ಕೊರೊನಾ ಕಡಿಮೆಯಾಗುತ್ತಿತ್ತು. ಲಾಕ್ ಡೌನ್ ಓಪನ್ ಮಾಡಿದ್ದರಿಂದ ಕೊರೊನಾ ವಿಪರೀತವಾಗಿ ನಿಯಂತ್ರಣಕ್ಕೆ ಬಾರದಂತಾಗಿದೆ ಎಂದು ಹೇಳಿದ್ದಾರೆ.
ಹಳ್ಳಿಗಳಲ್ಲಿ ಕೊರೊನಾದಿಂದ ಮರಣ ಮೃದಂಗ
Please follow and like us: