ವಿಜಯನಗರ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್, ಅಲ್ಪಸಂಖ್ಯಾತರು ಮುಗ್ದರು. ಅನಗತ್ಯವಾಗಿ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ಅಲ್ಪಸಂಖ್ಯಾತರು ಅಮಾಯಕರು, ಅವರಲ್ಲಿನ ಕೆಲ ಬುದ್ಧಿವಂತ ಲೀಡರ್ ಗಳು ಇವರನ್ನು ನಿಯಂತ್ರಿಸುತ್ತಿದ್ದಾರೆ.
ಕೆಲ ನಾಯಕರು ವೋಟ್ ಬ್ಯಾಂಕ್ ಗಾಗಿ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಸ್ಲಿಂ ರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅಲ್ಪಸಂಖ್ಯಾತರ ಅಮಾಯಕತೆಯನ್ನು ಬಳಸಿಕೊಂಡು ಜಾತಿ ವಿಷ ಬೀಜ ಬಿತ್ತಲಾಗುತ್ತಿದೆ. ಕಾಂಗ್ರೆಸ್ ನಾಯಕರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಯಾರೇ ಆಗಲಿ ಎಲ್ಲರೂ ಸಮಾನರು. ಸಂವಿಧಾನದ ಚೌಕಟ್ಟಿನಲ್ಲಿ ನಡೆಯಬೇಕು. ಅಮಾಯಕರನ್ನು ಹಿಡಿದುಕೊಂಡು ಗಲಾಟೆ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada