ರಾಯಚೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಧಮ್ ಗಿಮ್ ಎಂದು ಮಾತನಾಡುವುದು ಅವರ ಘನತೆಗೆ ತಕ್ಕನಾದುದ್ದಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಹಾಗೆ ನಮಗೂ ಮಾತನಾಡಲು ಬರುತ್ತದೆ.
ಆದರೆ ನಾವು ಯಾರಿಗೂ ಅಗೌವರದಿಂದ ಮಾತನಾಡುವುದಿಲ್ಲ. ಧಮ್ ದಮ್ಮು ಎಂಬ ಶಬ್ದಗಳನ್ನು ಸಣ್ಣ ಹುಡುಗರ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ ಎಂದರು.
ಆರ್ ಎಸ್ ಎಸ್ ಮತ್ತು ಎಸ್ ಡಿಪಿಐ ಹೋಲಿಕೆ ಮಾಡುವುದು ಸಿದ್ದರಾಮಯ್ಯನವರ ಬೌದ್ಧಿಕ ದಿವಾಳಿತನದ ಹೇಳಿಕೆಗೆ ಸಾಕ್ಷಿಯಾಗಿದೆ. ನೆಹರು ಕಾಲದಲ್ಲಿ ವಲ್ಲಭ ಬಾಯಿ ಪಟೇಲ್ ಗೃಹಮಂತ್ರಿಯಾಗಿದ್ದಾಗ ಗಣರಾಜ್ಯೋತ್ಸವದ ಪಥ ಸಂಚನಲ್ಲೂ ಆರ್ ಎಸ್ ಎಸ್ ಗೆ ಅವಕಾಶ ನೀಡಲಾಗಿತ್ತು ಎನ್ನುವುದನ್ನು ಅವರು ಮರೆಯಬಾರದು ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada